ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ನಿವಾಸಕ್ಕೆ ಬಾಂಬ್​ ಬೆದರಿಕೆ

Ravi Talawar
 ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ನಿವಾಸಕ್ಕೆ ಬಾಂಬ್​ ಬೆದರಿಕೆ
WhatsApp Group Join Now
Telegram Group Join Now

ಚೆನ್ನೈ, ಅಕ್ಟೋಬರ್​ 17: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರ ಚೆನ್ನೈನಲ್ಲಿರುವ  ನಿವಾಸಕ್ಕೆ ಬಾಂಬ್​ ಬೆದರಿಕೆ ಹಾಕಲಾಗಿದೆ. ಮನೆಯಲ್ಲಿ ಬಾಂಬ್​ ಇಟ್ಟಿರೋದಾಗಿ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದು, ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ಸಿಬ್ಬಂದಿ ಆಗಮಿಸಿ ಮನೆ ಬಳಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗದ ಕಾರಣ, ಇದು ಹುಸಿ ಬಾಂಬ್​ ಬೆದರಿಕೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ ಇತ್ತೀಚೆಗೆ ಹುಸಿ ಬಾಂಬ್​ ಬೆದರಿಕೆ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಿವೆ. ನಟ, ಟಿವಿಕೆ ಅಧ್ಯಕ್ಷ ವಿಜಯ್​ ಮನೆಯಲ್ಲಿಯೂ ಬಾಂಬ್​ ಇಟ್ಟಿರೋದಾಗಿ ವ್ಯಕ್ತಿಯೋರ್ವ ಪೊಲೀಸ್​ ಕಂಟ್ರೋಲ್​ ರೂಂಗೆ ಕರೆ ಮಾಡಿ ತಿಳಿಸಿದ್ದ. ಮಾಹಿತಿ ಆಧರಿಸಿ ವಿಜಯ್​ ಮನೆಯಲ್ಲಿ ಪರಿಶೀಲಿಸಿದಾಗ ಇದು ಹುಸಿಬಾಂಬ್​ ಕರೆ ಎಂಬುದು ಗೊತ್ತಾಗಿತ್ತು. ಘಟನೆ ಸಂಬಂಧ 38 ವರ್ಷದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದರು.

WhatsApp Group Join Now
Telegram Group Join Now
Share This Article