ಚುನಾವಣಾ ಬಾಂಡ್​ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣ; ಕಟೀಲ್ ವಿರುದ್ದದ ಅರ್ಜಿ ವಜಾ

Ravi Talawar
 ಚುನಾವಣಾ ಬಾಂಡ್​ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣ; ಕಟೀಲ್ ವಿರುದ್ದದ ಅರ್ಜಿ ವಜಾ
WhatsApp Group Join Now
Telegram Group Join Now

ನವದೆಹಲಿ: ಚುನಾವಣಾ ಬಾಂಡ್​ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಯಾವುದೇ ಕ್ರಿಮಿನಲ್ ಮೊಕದ್ದಮೆಯನ್ನು ಮುಂದುವರಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್​ ಇಂದು ಹೇಳಿದೆ. ಈ ಮೂಲಕ ಕಟೀಲ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಜನಾಧಿಕಾರ ಸಂಘರ್ಷ ಪರಿಷತ್​ನ ಆದರ್ಶ್ ಆರ್.ಅಯ್ಯರ್ ಅವರು ಸಲ್ಲಿಸಿದ ಮೇಲ್ಮನವಿಯನ್ನು ವಿಚಾರಣೆ ಮಾಡಿದ್ದು, ಅಸ್ಪಷ್ಟ ಹಾಗೂ ಸಂಪೂರ್ಣ ಊಹೆಯ ದೂರು ಎಂದು ಹೇಳಿದೆ. ಈ ಮೂಲಕ ಮೇಲ್ಮನವಿಯನ್ನು ವಜಾಗೊಳಿಸಿದೆ.

ಸೂಕ್ತ ಸಾಕ್ಷ್ಯಾಧಾರವಿಲ್ಲದೆ ನಾವು ತನಿಖೆಗೆ ಅವಕಾಶ ನೀಡಲು ಸಾಧ್ಯವಿಲ್ಲ. ಹೈಕೋಟ್ ಆದೇಶದ ಮಧ್ಯೆ ನಾವು ಮಧ್ಯ ಪ್ರವೇಶಿಸಲು ಬಯಸುವುದಿಲ್ಲ ಎಂದು ಹೇಳಿತು.

ಅದಕ್ಕೆ ಪ್ರತಿಯಾಗಿ ವಕೀಲ ಪ್ರಶಾಂತ್ ಭೂಷಣ್​, ಕ್ರಿಮಿನಲ್ ಪ್ರಕರಣವನ್ನು ಈ ರೀತಿಯಾಗಿ ಕುಗ್ಗಿಸಲು ಸಾಧ್ಯವಿಲ್ಲ ಎಂದು ಅರ್ಜಿದಾರರ ಪರ ವಾದಿಸಿದರು. ಆದರೆ, ಭವಿಷ್ಯದಲ್ಲಿ ಸೂಕ್ತ ಸಾಕ್ಷ್ಯಾಧಾರಗಳಿಲ್ಲದೆ ಎಫ್​ಐಆರ್​ ದಾಖಲಿಸಬಾರದು ಎಂದು ಪೀಠ ಆದೇಶಿಸಿತು.

WhatsApp Group Join Now
Telegram Group Join Now
Share This Article