ಇಂಡಿ: ಬೀದರ ಜಿಲ್ಲೆಯ ಬಸವಕಲ್ಯಾಣದಲ್ಲಿರುವ ಅನುಭವ ಪಂಟಪದ ತ್ರಿಪುರಾಂತಕ ಕೆರೆ ಹತ್ತಿರ ೧೨ನೇ ಶತಮಾನದ ಅನೇಕ ಬಸವಾದಿ ಶರಣರ ಅರಿವೀನ ಗವಿಗಳು ಇರುವುದಾಗಿ ಇತಿಹಾಸ ಸಾರುತ್ತಿದೆ. ಆದರೆ ಶಿವಶರಣ ಹಡಪದ ಅಪ್ಪಣ್ಣನವರ ಅರಿವಿನ ಗವಿಯನ್ನು ಬಸವೇಶ್ವರ ದೇವಸ್ಥಾನದ ಪಂಚಕಮಿಟಿಯವರು ಹಸ್ತಕ್ಷೇಪ ಮಾಡಿ ಅನ್ಯ ಶರಣರ ಮೂರ್ತಿಯನ್ನು ಆಕ್ರಮವಾಗಿ ಪ್ರತಿಷ್ಠಾಪನೆ ಮಾಡಿದ್ದಾರೆ. ಆದ್ದರಿಂದ ಇದನ್ನು ತೆರವುಗೊಳಿಸಿ ತ್ವರಿತವಾಗಿ ಶಿವಶರಣ ಹಡಪದ ಅಪ್ಪಣ್ಣನವರ ಮೂರ್ತಿ ಪ್ರತಿಷ್ಠಾಪಿಸಬೇಕು ಎಂದು ನಗರದ ಶ್ರೀ ಹಡಪದ ಅಪ್ಪಣ್ಣವರ ವಿವಿಧ ಉದ್ದೇಶಗಳ ಸಹಕಾರಿ ಸಂಘದ ಆಡಳಿತ ಮಂಡಳಿಯವರು ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಸಿಲ್ದಾರ ಬಿ.ಎಸ್.ಕಡಕಬಾವಿ ಅವರಿಗೆ ಸಲ್ಲಿಸಿ ಒತ್ತಾಯಿಸಿದರು.
ಇದರಿಂದ ಹಡಪದ ಅಪ್ಪಣ್ಣನವರಿಗೆ ಮತ್ತು ನಮ್ಮ ಸಮುದಾಯದ ಭಕ್ತಿ ಭಾವನೆಗಳಿಗೆ ಅನ್ಯಾಯವಾಗಿದ್ದು ನಮ್ಮ ಇತಿಹಾಸದ ಮೌಲ್ಯಗಳನ್ನು ಕುಗುವಂತಾಗಿದೆ. ಹಡಪದ ಅಪ್ಪಣ್ಣನವರ ವಂಶಸ್ತರಾದ ನಮಗೆ ಧಕ್ಕೆಯನ್ನುಂಟು ಮಾಡಿದ್ದು ಈಗಾಗಲೆ ಈ ಕುರಿತು ಸಮುದಾಯದ ಮುಖಂಡರು ಸಾಕಷ್ಟು ಬಾರಿ ಮನವಿ ಮಾಡಲಾಗಿದೆ. ಆದ್ದರಿಂದ ದಯವಿಟ್ಟು ಯಥಾಸ್ಥಿಗೆ ತಂದು ಆ ಸ್ಥಳವನ್ನು ಬಸವಕಲ್ಯಾಣ ಪ್ರಾಧಿಕಾರಕ್ಕೆ ಸೇರಿಸಿ ಅಭಿವೃದ್ದಿ ಪಡಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಸಂಘದ ಅಧ್ಯಕ್ಷ ಸಂತೋಷ ಗೌಳಿ, ಉಪಾಧ್ಯಕ್ಷ ಶೀವಾನಂದ ನಾವಿ, ಸಿದ್ದು ನಾವಿ, ಕಾರ್ಯದರ್ಶಿ ಸಿದರಾಯ ಅಪ್ತಾಗಿರಿ, ನಟರಾಜ ಗೌಳಿ, ಅಶೋಕ ಹಡಪದ, ಧುಳಪ್ಪ ನಾವಿ, ಬಾಳು ಗೌಳಿ, ಅಂಬಣ್ಣಾ ಹಡಪದ, ರಮೇಶ ನಾವಿ ಸೇರಿದಂತೆ ಅನೇಕರು ಇದ್ದರು. ಅದೇ ರೀತಿ ವಿಶ್ವ ಗುರು ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣನವರ ಅರಿವಿನ ಗವಿಯೂ ಅಲ್ಲಿ ಅಸ್ತತ್ವದಲ್ಲಿದೆ.
ಶಿವಶರಣ ಹಡಪದ ಅಪ್ಪಣ್ಣನವರ ಮೂರ್ತಿ ಪ್ರತಿಷ್ಠಾಪಿಸಲು ಒತ್ತಾಯ


