ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 161 ಕೋಟಿ ರೂ. ಬಿಡುಗಡೆ

Ravi Talawar
ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 161 ಕೋಟಿ ರೂ. ಬಿಡುಗಡೆ
WhatsApp Group Join Now
Telegram Group Join Now

ಬೆಂಗಳೂರು, ಅಕ್ಟೋಬರ್​ 19: ಕ್ಷೇತ್ರ ಅಭಿವೃದ್ಧಿಗೆ ಅನುದಾನ ಬಿಡುಗಡೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಆರೋಪ ಮಾಡಿದ್ದರು. ಆದರೆ, ಇದೀಗ ರಾಜ್ಯ ಸರ್ಕಾರ ಬಿಜೆಪಿ ಮತ್ತು ಜೆಡಿಎಸ್​ ಸೇರಿದಂತೆ 45 ಶಾಸಕರ ಕ್ಷೇತ್ರಗಳಿಗೆ ಕ್ರಿಯಾ ಯೋಜನೆ ಅಡಿ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 161 ಕೋಟಿ ರೂ. ಬಿಡುಗಡೆ ಮಾಡಿದೆ.

1,000 ಕೋಟಿ ರೂ. ಕ್ರಿಯಾ ಯೋಜನೆ ರೂಪಿಸುವಂತೆ ಸೂಚಿಸಿದ್ದ ಸಿಎಂ: ಕಳೆದ ವರ್ಷ ಡಿಸೆಂಬರ್​ನಲ್ಲಿ ನಡೆದಿದ್ದ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ವಸತಿ ಕಾಲೋನಿಗಳನ್ನು ಅಭಿವೃದ್ಧಿಪಡಿಸಲು 1,000 ಕೋಟಿ ರೂಪಾಯಿಗಳ ಕ್ರಿಯಾ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದೇ ವೇಳೆ ಮುಂದಿನ ವರ್ಷದಿಂದ ಹೆಚ್ಚಿನ ಅನುದಾನ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದರು. ಅದರಂತೆ ಇದೀಗ ಎರಡು ಹಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣ ಬಿಡುಗಡೆ ಮಾಡಿದ್ದಾರೆ.

WhatsApp Group Join Now
Telegram Group Join Now
Share This Article