ವಯನಾಡ್ ಭೂಕುಸಿತದಲ್ಲಿ 30 ಮಕ್ಕಳು ಸೇರಿ 215 ಮೃತದೇಹ ಪತ್ತೆ; 206 ಮಂದಿ ನಾಪತ್ತೆ

Ravi Talawar
ವಯನಾಡ್ ಭೂಕುಸಿತದಲ್ಲಿ 30 ಮಕ್ಕಳು ಸೇರಿ 215 ಮೃತದೇಹ ಪತ್ತೆ; 206 ಮಂದಿ ನಾಪತ್ತೆ
WhatsApp Group Join Now
Telegram Group Join Now

ತಿರುವನಂತಪುರಂ ಆಗಸ್ಟ್ 03: ವಯನಾಡಿನ  ಮುಂಡಕೈ ಮತ್ತು ಚೂರಲ್​​​ಮಲ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತದಲ್ಲಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್  ಹೇಳಿದ್ದಾರೆ. ಚಾಲಿಯಾರ್ ನದಿಯಿಂದ ದೇಹದ ಭಾಗಗಳನ್ನು ಗುರುತಿಸುವುದು ತುಂಬಾ ಕಷ್ಟ. ಆದರೆ, ರಕ್ಷಣಾ ಕಾರ್ಯಕರ್ತರು ಭರವಸೆ ಕಳೆದುಕೊಳ್ಳದೆ ಜೀವ ಉಳಿಸಲು ಯತ್ನಿಸುತ್ತಿದ್ದಾರೆ ಎಂದು ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಹೇಳಿದ್ದಾರೆ.

ದುರಂತದ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತದಲ್ಲಿದೆ. ಮೊದಲ ಹಂತದಲ್ಲಿ ಹಲವೆಡೆ ಸಿಲುಕಿರುವವರನ್ನು ಪತ್ತೆ ಹಚ್ಚಿ ರಕ್ಷಿಸುವ ಪ್ರಯತ್ನ ನಡೆದಿದೆ. ಜೀವದ ಕುರುಹುಗಳಾದರೂ ಇದ್ದರೆ, ರಕ್ಷಣಾ ಕಾರ್ಯಕರ್ತರು ಅವರನ್ನು ಹುಡುಕಿ, ಕಾಪಾಡಲು ಪ್ರಯತ್ನಿಸಿದರು, ತಮ್ಮ ಪ್ರಾಣವನ್ನೇ ಪಣಕ್ಕಿಟ್ಟರು. ನಿಲಂಬೂರ್ ಪ್ರದೇಶದಲ್ಲಿ ಪತ್ತೆಯಾದ ಮೃತ ದೇಹಗಳು ಮತ್ತು ದೇಹದ ಭಾಗಗಳನ್ನು ಗುರುತಿಸುವುದು ತುಂಬಾ ಕಷ್ಟಕರವಾಗಿದೆ.

ಒಟ್ಟು 215 ಮೃತದೇಹಗಳು ಪತ್ತೆಯಾಗಿವೆ. 87 ಮಹಿಳೆಯರು ಮತ್ತು 98 ಪುರುಷರು ಇದ್ದಾರೆ. ದುರಂತದಲ್ಲಿ 30 ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. 148 ಮೃತ ದೇಹಗಳನ್ನು ಹಸ್ತಾಂತರಿಸಲಾಗಿದೆ.  206 ಮಂದಿ ನಾಪತ್ತೆಯಾಗಿದ್ದಾರೆ. 81 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 206 ಜನರನ್ನು ಬಿಡುಗಡೆ ಮಾಡಿ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ. ವಯನಾಡಿನಲ್ಲಿ 93 ಶಿಬಿರಗಳಲ್ಲಿ 10,042 ಜನರಿದ್ದಾರೆ. ಚೂರಲ್​​ಮಲದಲ್ಲಿ 10 ಶಿಬಿರಗಳಲ್ಲಿ 1707 ಜನರು ಆಶ್ರಯ ಪಡೆದಿದ್ದಾರೆ ಎಂದು ಸಿಎಂ ಹೇಳಿದ್ದಾರೆ.

ದುರಂತದ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತದಲ್ಲಿದೆ. ಮೊದಲ ಹಂತದಲ್ಲಿ ಹಲವೆಡೆ ಸಿಲುಕಿರುವವರನ್ನು ಪತ್ತೆ ಹಚ್ಚಿ ರಕ್ಷಿಸುವ ಪ್ರಯತ್ನ ನಡೆದಿದೆ. ಜೀವದ ಕುರುಹುಗಳಾದರೂ ಇದ್ದರೆ, ರಕ್ಷಣಾ ಕಾರ್ಯಕರ್ತರು ಅವರನ್ನು ಹುಡುಕಿ, ಕಾಪಾಡಲು ಪ್ರಯತ್ನಿಸಿದರು, ತಮ್ಮ ಪ್ರಾಣವನ್ನೇ ಪಣಕ್ಕಿಟ್ಟರು. ನಿಲಂಬೂರ್ ಪ್ರದೇಶದಲ್ಲಿ ಪತ್ತೆಯಾದ ಮೃತ ದೇಹಗಳು ಮತ್ತು ದೇಹದ ಭಾಗಗಳನ್ನು ಗುರುತಿಸುವುದು ತುಂಬಾ ಕಷ್ಟಕರವಾಗಿದೆ.

ಒಟ್ಟು 215 ಮೃತದೇಹಗಳು ಪತ್ತೆಯಾಗಿವೆ. 87 ಮಹಿಳೆಯರು ಮತ್ತು 98 ಪುರುಷರು ಇದ್ದಾರೆ. ದುರಂತದಲ್ಲಿ 30 ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. 148 ಮೃತ ದೇಹಗಳನ್ನು ಹಸ್ತಾಂತರಿಸಲಾಗಿದೆ.  206 ಮಂದಿ ನಾಪತ್ತೆಯಾಗಿದ್ದಾರೆ. 81 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 206 ಜನರನ್ನು ಬಿಡುಗಡೆ ಮಾಡಿ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ. ವಯನಾಡಿನಲ್ಲಿ 93 ಶಿಬಿರಗಳಲ್ಲಿ 10,042 ಜನರಿದ್ದಾರೆ. ಚೂರಲ್​​ಮಲದಲ್ಲಿ 10 ಶಿಬಿರಗಳಲ್ಲಿ 1707 ಜನರು ಆಶ್ರಯ ಪಡೆದಿದ್ದಾರೆ ಎಂದು ಸಿಎಂ ಹೇಳಿದ್ದಾರೆ.

WhatsApp Group Join Now
Telegram Group Join Now
Share This Article