ಬಳ್ಳಾರಿ ಮೇ 30. : 10ನೇ ತರಗತಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇಕಡ 80 ರಿಂದ 90 ರಷ್ಟು ಅಂಕ ಗಳಿಸಿದ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜೂನ್ 1 ಭಾನುವಾರ ಬೆಳಿಗ್ಗೆ ನಗರದ ಅಲ್ಲಿಪುರದ ಮಹದೇವ ತಾತನವರ ಮಠದಲ್ಲಿ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ್ ಬಿಸಿಲಹಳ್ಳಿ ತಿಳಿಸಿದರು.
ಇಂದು ನಗರದ ಮರ್ಚಾಡ್ ಹೋಟೆಲ್ ನಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿ, ಪ್ರತಿಭಾ ಪುರಸ್ಕಾರಕ್ಕಾಗಿ ಈಗಾಗಲೇ ಹತ್ತನೇ ತರಗತಿಯ 124 ಜನ ವಿದ್ಯಾರ್ಥಿಗಳು ಮತ್ತು ಎರಡನೇ ಪಿಯುಸಿಯಲ್ಲಿ ಪಾಸಾದ 119 ವಿದ್ಯಾರ್ಥಿಗಳು ಸೇರಿದಂತೆ 300ಕ್ಕೂ ಅಧಿಕ ಅರ್ಜಿಗಳು ಬಂದಿದ್ದು ಇನ್ನು ಅರ್ಜಿಗಳು ಬರುವ ನಿರೀಕ್ಷೆ ಇದೆ ಎಲ್ಲವನ್ನು ಪರಿಗಣಿಸಿ ವಿದ್ಯಾರ್ಥಿಗಳ ಮುಂದಿನ ವಿದ್ಯೆಭಾಸದ ಅನುಕೂಲಕ್ಕಾಗಿ ಪ್ರತಿಭಾ ಪುರಸ್ಕಾರವನ್ನು ನೀಡಿ ಪ್ರೋತ್ಸಾಹಿಸುದು ಮುಖ್ಯ ಉದ್ದೇಶ ಎಂದು ವೇದಿಕೆಯ ಗೌರವ ಅಧ್ಯಕ್ಷರಾದ ಚನ್ನಬಸವಯ್ಯ ಸ್ವಾಮಿ ತಿಳಿಸಿದರು
ಈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಅಕ್ಕ ನಾಗಲಾಂಬಿಕ ಸಂಘಟನೆ, ವೀರಶೈವ ತರುಣ ಸಂಘ, ವೀರಶೈವ ಮಹಾಸಭಾ, ವೀರಶೈವ ನೌಕರರ ಸಂಘದ ಸಹಯೋಗದಲ್ಲಿ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷರಾದ ಎಸ್ ಪಿ ಜಗದೀಶ್ , ಸದಸ್ಯರಾದ ನಾಗೇಶ್ ಸೇರಿದಂತೆ ಇತರರಿದ್ದರು.