ಕಾರಂಜಿಮಠದಲ್ಲಿ 275ನೇ ಶಿವಾನುಭವ ಕಾರ್ಯಕ್ರಮ

Ravi Talawar
ಕಾರಂಜಿಮಠದಲ್ಲಿ 275ನೇ ಶಿವಾನುಭವ ಕಾರ್ಯಕ್ರಮ
WhatsApp Group Join Now
Telegram Group Join Now

ಬೆಳಗಾವಿ ಶಿವಬಸವನಗರ ಕಾರಂಜಿಮಠದ ಶಿವಾನುಭವ ಮಂಟಪದಲ್ಲಿ ೨೭೪ನೇ ಶಿವಾನುಭವ ಕಾರ್ಯಕ್ರಮವು ಸೋಮವಾರ ದಿನಾಂಕ ೩ ಜೂನ ೨೦೨೪ರಂದು ಸಾಯಂಕಾಲ ೬ ಗಂಟೆಗೆ ಜರುಗುವುದು.

ಕಾರ್ಯಕ್ರಮದ ಸಾನ್ನಿಧ್ಯವನ್ನು ಪೂಜ್ಯ ಶ್ರೀ ಮ.ನಿ.ಪ್ರ. ಗುರುಸಿದ್ಧ ಮಹಾಸ್ವಾಮಿಗಳು ವಹಿಸಲಿದ್ದು, ಶ್ರೀ ಬಸವರಾಜ ಗಾರ್ಗಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಯರಗಟ್ಟಿ ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ಪ್ರಾಧ್ಯಾಪಕರಾದ ಡಾ. ರಾಜಶೇಖರ ಬಿರಾದಾರ ಅವರು ಬಸವಾದಿ ಶರಣರ ಅನುರೂಪದ ದಾಂಪತ್ಯ” ಎಂಬ ವಿಷಯ ಕುರಿತು ಉಪನ್ಯಾಸ ನೀಡುವರು ಶ್ರೀ ಕಾರಂಜಿಮಠದ ಕುಮಾರೇಶ್ವರ ಸಂಗೀತ ಪಾಠಶಾಲೆಯ ಮಕ್ಕಳಿಂದ ಪ್ರಾರ್ಥನೆ ಜರುಗುವುದು ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

WhatsApp Group Join Now
Telegram Group Join Now
Share This Article