ಹುಬ್ಬಳ್ಳಿ, (ಜೂನ್ 26): ರಾಜ್ಯದಲ್ಲಿ ತಾವು ಅಧಿಕಾರಕ್ಕೆ ಬಂದ್ರೆ ಪ್ರತಿಯೊಬ್ಬ ಗೃಹಲಕ್ಷ್ಮಿಯರಿಗೆ ಎರಡು ಸಾವಿರ ಹಣ ನೀಡುವುದಾಗಿ ಕಾಂಗ್ರೆಸ್ ನಾಯಕರು ಹೇಳಿದ್ದರು. ಅದರಂತೆ ಅಧಿಕಾರಕ್ಕೆ ಬಂದಮೇಲೆ 2023 ರ ಜುಲೈ ತಿಂಗಳಿಂದ ಈ ಗೃಹಲಕ್ಷ್ಮಿ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಅಧಿಕೃತವಾಗಿ ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ ಸರಿಸುಮಾರು 1.25 ಕೋಟಿ ಗೃಹಣಿಯರು ಈ ಯೋಜನೆಯ ಫಲಾನುಭವಿಗಳಾಗಿದ್ದು, ಈ ಯೋಜನೆಗಾಗಿಯೇ ಕಳೆದ ಬಜೆಟ್ ನಲ್ಲಿ ಸರ್ಕಾರ ಬಜೆಟ್ ನಲ್ಲಿ 28608 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಆದ್ರೆ ಗೃಹಲಕ್ಷ್ಮಿ ಹಣ ಸರಿಯಾಗಿ ಪ್ರತಿ ತಿಂಗಳು ಖಾತೆಗೆ ಜಮೆಯಾಗದಿರುವುದರಿಂದ ಫಲಾನುಭವಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಈ ಹಿಂದೆ ಸರ್ಕಾರ ಪ್ರತಿ ತಿಂಗಳು ಹಣ ಹಾಕುವುದಾಗಿ ಹೇಳಿತ್ತು. ಆದ್ರೆ ಕಳೆದ ಮೂರು ತಿಂಗಳಿಂದ ನಮ್ಮ ಅಕೌಂಟ್ ಗೆ ಹಣ ಬಂದಿಲ್ಲ. ಹಣ ಬಂದಿದೆ ಎಂದು ಬ್ಯಾಂಕ್ ಗೆ ಹೋಗಿ ಬರುತ್ತಿದ್ದೇವೆ. ಆದ್ರೆ ಬ್ಯಾಂಕ್ ನವರು ಯಾವುದೇ ಹಣ ಜಮೆಯಾಗಿಲ ಎಂದು ಹೇಳುತ್ತಿದ್ದಾರೆ.