ಜುಲೈ 30 ರಂದು ಅವ್ವ 85ನೇ ಮಾತೃ ನಮನ

Ravi Talawar
ಜುಲೈ 30 ರಂದು ಅವ್ವ 85ನೇ ಮಾತೃ ನಮನ
WhatsApp Group Join Now
Telegram Group Join Now

ರಾಮದುರ್ಗ: ಮಾತೋಶ್ರೀ ಶಾಂತಮ್ಮ ಗುರುಲಿಂಗಯ್ಯಸ್ವಾಮಿಗಳು ಹಿರೇಮಠ ಇವರ ಜನ್ಮ ದಿನಾಚರಣೆ ಹಾಗೂ ನೂತನವಾಗಿ ನಿರ್ಮಿಸಿದ ಮಾತೃ ಸದನ ಉದ್ಘಾಟನೆ ಮತ್ತು ೮೫ ವಯೋವೃದ್ಧ ಮಾತೆಯರಿಗೆ ಗೌರವ ಸನ್ಮಾನ ಡಾ. ಶಿವಲಿಂಗ ಮುರಘರಾಜೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಜುಲೈ ೩೦ರಂದು ಬೆಳಿಗ್ಗೆ 11 ಗಂಟೆಗೆ ಭಾಗೋಜಿಕೊಪ್ಪದ ಗುರುವರೇಣ್ಯ ಗ್ರಾಮೀಣ ವಿದ್ಯಾಪೀಠ ಶಿವಯೋಗೀಶ್ವರ ಹಿರೇಮಠದಲ್ಲಿದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮವನ್ನು ಕನ್ನೇರಿ ಸಿದ್ಧಗಿರಿ ಮಹಾಸಂಸ್ಥಾನಮಠದ ಅದೃಶ್ಯ ಕಾಡಸಿದ್ಧೇಶ್ವರ ಮಹಾಸ್ವಾಮಿಗಳು ಉದ್ಘಾಟಿಸಲಿದ್ದಾರೆ. ಗಡದೇಶ್ವರ ಹಿರೇಮಠ ಕಟಕೋಳ ಎಂ.ಚಂದರಗಿಯ ವೀರಭದ್ರ ಶಿವಯೋಗಿ ಶಿವಾಚಾರ್ಯ ಮಹಾಸ್ವಾಮಿಗಳು ಮತ್ತು ಅಂಕಲಿಮಠ ಚಿಕ್ಕೊಪ್ಪ ಕೆಎಸ್ ಶ್ರೀ ವೀರಭದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯವನ್ನು ವಹಿಸಲಿದ್ದಾರೆ.

ಮಾತೃನಮನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂಕಲಿಮಠದ ಮಾತೋಶ್ರೀ ನೀಲಮ್ಮತಾಯಿಯವರು ವಹಿಸಿಕೊಕೊಳ್ಳಲಿದ್ದಾರೆ. ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್, ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಸೇರಿದಂತೆ ರಾಮದುರ್ಗ ತಾಲೂಕಿನ ಮತ್ತು ಬೆಳಗಾವಿ ಜಿಲ್ಲೆಯ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಜೊತೆಗೆ ಜಿಲ್ಲೆಯ ವಿವಿಧ ಮಠಗಳ ಮಠಾಧೀಶರು ಮತ್ತು ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಭಾಗೋಜಿಕೊಪ್ಪದ ಡಾ. ಶಿವಲಿಂಗ ಮುರಘರಾಜೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

WhatsApp Group Join Now
Telegram Group Join Now
Share This Article