33 ಸಾವಿರ ಕೋಟಿ ಬಾಕಿ ರಿಲೀಸ್ ಆಗದಿದ್ರೆ ಹೋರಾಟ: ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಗುತ್ತಿಗೆದಾರರು

Ravi Talawar
33 ಸಾವಿರ ಕೋಟಿ ಬಾಕಿ ರಿಲೀಸ್ ಆಗದಿದ್ರೆ ಹೋರಾಟ: ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಗುತ್ತಿಗೆದಾರರು
WhatsApp Group Join Now
Telegram Group Join Now

ಬೆಂಗಳೂರು, ಅಕ್ಟೋಬರ್ 17: ಕಮಿಷನ್ ಕಿಚ್ಚು ಮತ್ತೆ ಧಗಧಗಸಲು ಶುರುವಾಗಿದೆ. ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್ (Congress), ನಂತರ ಅಧಿಕಾರಕ್ಕೇರಿತ್ತು. ನಾವು ಅಧಿಕಾರಕ್ಕೆ ಬಂದರೆ ಗುತ್ತಿಗೆದಾರ ಸಮಸ್ಯೆ ಈಡೇರಿಸುತ್ತೇವೆ ಎಂದು ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದರು. ಆದರೆ, ಇನ್ನೂ ಬಾಕಿ ಬಿಡುಗಡೆ ಮಾಡಿಲ್ಲ ಎಂದು ಗುತ್ತಿಗೆದಾರರು ಸಿಡಿದೆದ್ದಿದ್ದಾರೆ. ಕರ್ನಾಟಕ ರಾಜ್ಯ ಗುತ್ತಿಗೆದಾದರ ಸಂಘದ ಅಧ್ಯಕ್ಷ ಆರ್ ಮಂಜುನಾಥ್ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ, ಕಮಿಷನ್ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ಜಾಸ್ತಿಯಾಗಿದೆ. ಆದರೆ, 60, 80 ಪರ್ಸೆಂಟ್ ಎಂದು ನಾವು ಹೇಳಿಲ್ಲ ಎಂದಿದ್ದಾರೆ.

WhatsApp Group Join Now
Telegram Group Join Now
Share This Article