ಬೆಂಗಳೂರು, ನವೆಂಬರ್ 16: ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಸೇರಿದಂತೆ ಹಲವು ಅವ್ಯವಹಾರಗಳ ಆರೋಪ ಎದುರಿಸುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಅವ್ಯವಹಾರಗಳ ತನಿಖೆಗೆ ಆದೇಶಿಸುವ ಮೂಲಕ ಕೌಂಟರ್ ಕೊಡಲು ಮುಂದಾಗಿದೆ.
ಕೋವಿಡ್ ಹಗರಣದ ತನಿಖೆಗೆ ಎಸ್ಐಟಿ ರಚನೆ ಮಾಡಲು ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿತ್ತು. ಈ ಮಧ್ಯೆ, ಬಿಜೆಪಿ ಸರ್ಕಾರದ ವಿರುದ್ಧ ಈ ಹಿಂದೆ, ಅಂದಿನ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಮಾಡಿದ್ದ 40 ಪರ್ಸೆಂಟ್ ಆರೋಪ ಸುಳ್ಳೆಂಬುದು ಲೋಕಾಯುಕ್ತ ತನಿಖೆಯಿಂದ ತಿಳಿದುಬಂದಿದೆ.