ಮಲೆ ಮಹದೇಶ್ವರ ಅರಣ್ಯ ಪ್ರದೇಶದಲ್ಲಿ 5 ಹುಲಿಗಳ ಅನುಮಾನಾಸ್ಪದ ಸಾವು: ಸರ್ಕಾರ ಉನ್ನತ ತನಿಖೆಯ ಭರವಸೆ

Ravi Talawar
ಮಲೆ ಮಹದೇಶ್ವರ ಅರಣ್ಯ ಪ್ರದೇಶದಲ್ಲಿ 5 ಹುಲಿಗಳ ಅನುಮಾನಾಸ್ಪದ ಸಾವು: ಸರ್ಕಾರ ಉನ್ನತ ತನಿಖೆಯ ಭರವಸೆ
WhatsApp Group Join Now
Telegram Group Join Now

ಚಾಮರಾಜನಗರ, ಜೂನ್ 27: ಚಾಮರಾಜನಗರ  ಜಿಲ್ಲೆಯ ಮಲೆ ಮಹದೇಶ್ವರ ವನ್ಯ ಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು (Tiger) ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಸಂಭಂದ ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಐವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಹುಲಿಗಳ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಈಗಾಗಲೇ ಆಶ್ವಾಸನೆ ನೀಡಿದೆ. ಹುಲಿಗಳ ಮರಣೋತ್ತರ ಪರೀಕ್ಷೆ ಇಂದು ನಡೆಯಲಿದ್ದು, ವರದಿ ಕೈಸೇರಿದ ಬಳಿಕ ಸಾವಿಗೆ ನಿಖರ ಕಾರಣ ಏನೆಂಬುದು ಗೊತ್ತಾಗಲಿದೆ.

ಹುಲಿ ಸಾವು ಸಂಬಂಧ ಮೀಣ್ಯಂ ಅರಣ್ಯ ಪ್ರದೇಶ ಸಮೀಪದ ಗ್ರಾಮಸ್ಥರನ್ನೂ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಪೊಲೀಸರು ಗ್ರಾಮಸ್ಥರನ್ನು ಘಟನಾ ಸ್ಥಳಕ್ಕೆ ಕರೆದುಕೊಂಡು ಹೋಗಿ ಮಾಹಿತಿ ಕಲೆಹಾಕುತ್ತಿದ್ದಾರೆ. ಹಸುವಿನ ಕಳೇಬರದ ಬಳಿ ಕರೆದುಕೊಂಡು ಹೋಗಿ ಯಾರು ಅದರ ಮಾಲೀಕರು ಎಂಬುದನ್ನೂ ವಿಚಾರಣೆ ಮಾಡಲಾಗುತ್ತಿದೆ.

ಹುಲಿಗಳ ಮೃತದೇಹಗಳು ದೊರೆತ ಸ್ಥಳದಲ್ಲಿಯೇ ಹಸುವಿನ ಶವ ಕೂಡ ಸಿಕ್ಕಿದ್ದು, ಹುಲಿಗಳಿಗೆ ವಿಶಪ್ರಾಷನ ಮಾಡಿಸಿರುವ ಶಂಕೆಗೆ ಕಾರಣವಾಗಿದೆ. ಹಸುವಿನ ಮೃತ ದೇಹದ ಬಾಲ ತುಂಡಾಗಿರುವುದು ಕಂಡು ಬಂದಿದೆ. ಹೀಗಾಗಿ, ಸತ್ತ ಹಸುವಿಗೆ ಯಾರೋ ವಿಷ ಸಿಂಪಡಿಸಿರುವ ಸಾಧ್ಯತೆ ಇದೆ. ಅದನ್ನು ತಿಂದು ಹುಲಿ ಮತ್ತು ಹುಲಿ ಮರಿಗಳು ಮೃತಪಟ್ಟಿರಬಹುದು ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ನಂತರ ಸತ್ಯ ಏನೆಂಬುದು ಗೊತ್ತಾಗಲಿದೆ.

WhatsApp Group Join Now
Telegram Group Join Now
Share This Article