ಬಿಹಾರದ ಸಿದ್ದೇಶ್ವರನಾಥ ಮಂದಿರದಲ್ಲಿ ಕಾಲ್ತುಳಿತಕ್ಕೆ 7 ಭಕ್ತರ ಸಾವು

Ravi Talawar
ಬಿಹಾರದ ಸಿದ್ದೇಶ್ವರನಾಥ ಮಂದಿರದಲ್ಲಿ ಕಾಲ್ತುಳಿತಕ್ಕೆ 7 ಭಕ್ತರ ಸಾವು
WhatsApp Group Join Now
Telegram Group Join Now

ಬಿಹಾರದ ಜೆಹಾನಾಬಾದ್‌ನಲ್ಲಿ ಶ್ರಾವಣದ ನಾಲ್ಕನೇ ಸೋಮವಾರದಂದು ಸಿದ್ದೇಶ್ವರನಾಥ ದೇವಾಲಯಕ್ಕೆ ಪೂಜೆ ಸಲ್ಲಿಸಲು ಹೋಗಿದ್ದ ಭಕ್ತಾದಿಗಳು ಕಾಲ್ತುಳಿದಿಂದ ಸಾವನ್ನಪ್ಪಿದ್ದಾರೆ. ಮೂವರು ಮಹಿಳೆಯರು ಸೇರಿ 7 ಮಂದಿ ಮೃತಪಟ್ಟಿದ್ದಾರೆ. ಏಳು ಜನರ ಸಾವನ್ನು ಆಡಳಿತ ದೃಢಪಡಿಸಿದೆ. ಅಲ್ಲದೆ ಹಲವರಿಗೆ ಗಾಯಗಳಾಗಿವೆ. ಸಾವನ ನಾಲ್ಕನೇ ಸೋಮವಾರದ ನಿಮಿತ್ತ ಬಾಬಾ ಸಿದ್ದೇಶ್ವರನಾಥ ದೇವಸ್ಥಾನದಲ್ಲಿ ಇಂದು ಬೆಳಗ್ಗೆ ಅಪಾರ ಸಂಖ್ಯೆಯ ಭಕ್ತರು ಜಮಾಯಿಸಿದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.

ತುಂಬಾ ಜನರು ಇದ್ದ ಕಾರಣ ನೂಕುನುಗ್ಗಲು ಏರ್ಪಟ್ಟಿತ್ತು, ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ, ಪೊಲೀಸ್-ಆಡಳಿತ ತಂಡವು ಸ್ಥಳಕ್ಕೆ ಧಾವಿಸಿದ್ದು, ತಕ್ಷಣವೇ ಪರಿಹಾರ ಕಾರ್ಯವನ್ನು ಪ್ರಾರಂಭಿಸಿತು. ಶ್ರಾವಣ ಮಾಸದ ಸೋಮವಾರದಂದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಆಗಮಿಸುತ್ತಾರೆ.

ರಾಬರ್ ಬೆಟ್ಟ ಹತ್ತುವಾಗ ಮೆಟ್ಟಿಲುಗಳ ಮೇಲೆ ಹಠಾತ್ ಕಾಲ್ತುಳಿತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಜನರು ಒಬ್ಬರನ್ನೊಬ್ಬರು ತುಳಿದುಕೊಳ್ಳುತ್ತಾ ಅಲ್ಲಿ ಇಲ್ಲಿ ಓಡತೊಡಗಿದರು. ಪೊಲೀಸರು ಪರಿಸ್ಥಿತಿ ನಿಯಂತ್ರಿಸುವಷ್ಟರಲ್ಲಿ ಏಳು ಮಂದಿ ಸಾವನ್ನಪ್ಪಿದ್ದರು. ಸೋಮವಾರ ಬೆಳಗ್ಗೆ ಸೂರ್ಯೋದಯದ ವೇಳೆ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

WhatsApp Group Join Now
Telegram Group Join Now
Share This Article