ಒಳ ಚರಂಡಿ ಸಮಸ್ಯೆಗೆ ತಾತ್ಕಾಲಿಕ ಪರಿಹಾರ  ಪಾಲಿಕೆ ಸದಸ್ಯ ಮಿಂಚು ಶ್ರೀನಿವಾಸ್ 

Ravi Talawar
ಒಳ ಚರಂಡಿ ಸಮಸ್ಯೆಗೆ ತಾತ್ಕಾಲಿಕ ಪರಿಹಾರ  ಪಾಲಿಕೆ ಸದಸ್ಯ ಮಿಂಚು ಶ್ರೀನಿವಾಸ್ 
WhatsApp Group Join Now
Telegram Group Join Now
 ಬಳ್ಳಾರಿ,ಜೂ.29: ಬಳ್ಳಾರಿ ಮಹಾನಗರ ಪಾಲಿಕೆಯ 35ನೇ ವಾರ್ಡ್‌ ಇಂದಿರಾನಗರ ಮುಖ್ಯರಸ್ತೆಯಲ್ಲಿ ಕಳೆದ ಹತ್ತು ದಿನಗಳಿಂದ ಒಳ ಚರಂಡಿ ಬ್ಲಾಕ್ ಆಗಿ ನೀರು ರಸ್ತೆಯ ಮೂಲಕ ಹರಿಯುತ್ತಿತ್ತು. ಇದನ್ನು ಗಮಿನಿಸಿದ ಪಾಲಿಕೆ ಸದಸ್ಯ ವಿ.ಶ್ರೀನಿವಾಸುಲು ಮಿಂಚುರವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ನಮ್ಮ ಸುದ್ದಿ ವಾಹಿನಿ ಜೊತೆ ಮಾತನಾಡಿ ಈ ಸಮಸ್ಯೆ ಪರಿಹಾರಕ್ಕಾಗಿ ಕಳೆದ ಹತ್ತು ದಿನಗಳಿಂದ ಕೆಲಸ ಮಾಡಿಸಿದರು ಸಮಸ್ಯೆ ಬಗೆಹರೆದಿಲ್ಲ ಇದಕ್ಕೆ
ಮಹಾನಗರ ಪಾಲಿಕೆ ಅಧಿಕಾರಿಗಳು ಹಳೆಯ ಚಿಕ್ಕ ಗಾತ್ರದ ಪೈಪ್ ಲೈನ್ ತೆಗೆದು ಹೊಸ ದೊಡ್ಡ ಗಾತ್ರದ ಪೈಪ್ ಲೈನ್ ಹಾಕಿ ಶಾಶ್ವತ ಪರಿಹಾರ ಮಾಡಬೇಕು ಆದರೆ ಸದ್ಯ ಮಹಾನಗರ ಪಾಲಿಕೆಯಲ್ಲಿ ಹಣದ ಕೊರತೆ ಇರುವುದರಿಂದ ಇಂದು ತಾತ್ಕಾಲಿಕವಾಗಿ ಜೆಸಿಬಿ ಮೂಲಕ ಒಳ ಚರಂಡಿ ನೀರನ್ನು ಪಕ್ಕದ ಯುಜಿಡಿಗೆ ಕಲೆಕ್ಷನ್ ಕೊಡುವ ಮೂಲಕ ತಾತ್ಕಾಲಿಕ ಪರಿಹಾರ ಮಾಡಲಾಗಿದೆ ಎಂದು 35 ನೇ ವಾರ್ಡ್ ನ ಪಾಲಿಕೆ ಸದಸ್ಯ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article