ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ಸುಪ್ರಿಂಕೋರ್ಟ್​ ನೋಟಿಸ್​ ಜಾರಿ

Ravi Talawar
ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ಸುಪ್ರಿಂಕೋರ್ಟ್​ ನೋಟಿಸ್​ ಜಾರಿ
WhatsApp Group Join Now
Telegram Group Join Now

ನವದೆಹಲಿ, ಬೆಂಗಳೂರು, ಜುಲೈ​ 10: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ  ಸುಪ್ರಿಂಕೋರ್ಟ್​  ಭವಾನಿ ರೇವಣ್ಣ  ಅವರಿಗೆ ನೋಟಿಸ್​ ಜಾರಿ ಮಾಡಿದೆ. ಭವಾನಿ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್​ ನೀಡಿದ ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಎಸ್​​ಐಟಿ ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿದೆ. ನ್ಯಾ. ಸೂರ್ಯಕಾಂತ್, ಉಜ್ಜಲ್ ಭುಯಾನ್ ಅವರಿದ್ದ ದ್ವಿ ಸದಸ್ಯ ಪೀಠ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿತು. ಎಸ್​ಐಟಿ ಪರ ವಾದ ಮಂಡಿಸಿದ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರು.

ಮಗನ ಅಪರಾಧದಲ್ಲಿ ತಾಯಿಯ ಪಾತ್ರವಿಲ್ಲ. ಆದರೆ ಸಂತ್ರಸ್ತೆಯ ಅಪಹರಣದ ಬಗೆಗಿನ ಪ್ರಕರಣ ಇದು. ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಲು ನಿರ್ದೇಶನ ನೀಡಿದ್ದರು. ಮ್ಯಾಜಿಸ್ಟ್ರೇಟ್ ಮುಂದೆ ನೀಡಿದ ಹೇಳಿಕೆಯಲ್ಲಿ ದಾಖಲಾಗಿದೆ. ಆಕೆ ಆರೋಪದಿಂದ ಮುಕ್ತ ಎನ್ನುವಂತಿಲ್ಲ, ವಿಚಾರಣೆ ಎದುರಿಸಬೇಕು. ಆಕೆಯನ್ನ ಬಂಧನದಿಂದ ರಕ್ಷಿಸಲು ಹೈಕೋರ್ಟ್ ಕಾರಣ ನೀಡಿದೆ. ವಿಚಾರಣಾ ನ್ಯಾಯಾಲಯವೂ ನಿರೀಕ್ಷಣಾ ಜಾಮೀನು ತಿರಸ್ಕರಸಿದೆ. ಆದರೆ, ಜಾಮೀನು ಏಕೆ ತಿರಸ್ಕಾರವಾಯಿತೆಂದು ಹೈಕೋರ್ಟ್ ಪರಿಗಣಿಸಿಲ್ಲ ಎಂದು ಅಪಹರಣದ ಕುರಿತು ಪ್ರಕರಣವಿದು ಅಂತ ಕಪಿಲ್ ಸಿಬಲ್ ಮನವರಿಕೆ ಮಾಡಿದರು.

WhatsApp Group Join Now
Telegram Group Join Now
Share This Article