ಅಧಿವೇಶನದಲ್ಲಿ ಶಾಸಕರಿಗೆ  ಕಿರು ನಿದ್ರೆಗಾಗಿ ವಿಶೇಷ ಆಸನ ವ್ಯವಸ್ಥೆ!

Ravi Talawar
ಅಧಿವೇಶನದಲ್ಲಿ ಶಾಸಕರಿಗೆ  ಕಿರು ನಿದ್ರೆಗಾಗಿ ವಿಶೇಷ ಆಸನ ವ್ಯವಸ್ಥೆ!
WhatsApp Group Join Now
Telegram Group Join Now

ಬೆಂಗಳೂರು, ಜುಲೈ 19: ಕರ್ನಾಟಕ ಅಧಿವೇಶನ ನಡೆದ ಸಂದರ್ಭದಲ್ಲಿ, ಮಧ್ಯಾಹ್ನ ಊಟದ ಬಳಿಕ ಶಾಸಕರಿಗೆ  ಕಿರು ನಿದ್ರೆಗಾಗಿ ವಿಶೇಷ ಆಸನ ವ್ಯವಸ್ಥೆ ಮಾಡಲು ವಿಧಾಸಭೆ ಸಭಾಧ್ಯಕ್ಷ ಯುಟಿ ಖಾದರ್​​ ನಿರ್ಧರಿಸಿದ್ದಾರೆ. ಮುಂಗಾರು ಅಧಿವೇಶನ ನಾಲ್ಕನೇ ದಿನವಾದ ಇಂದು (ಜು.19) ಸಭಾಧ್ಯಕ್ಷ ಯುಟಿ ಖಾದರ್​ ಅವರು ಈ ವಿಷಯ ಪ್ರಸ್ತಾಪಿಸಿದರು. “ವಿಧಾಸಭೆ ಸದಸ್ಯರಿಗಾಗಿ ಬೆಳಗ್ಗೆ ಉಪಹಾರ, ಮಧ್ಯಾಹ್ನ ಉತ್ತಮ ಊಟದ ವ್ಯವಸ್ಥೆ ಮಾಡಲಾಗಿದೆ. ಊಟವಾದ ಮೇಲೆ ಕೆಲ ಶಾಸಕರು ಕಿರು ನಿದ್ದೆ ಮಾಡಿ ಬರುತ್ತೇನೆ ಎಂದು ಹೇಳಿ ಹೋದವರು ಮರಳಿ ಬರುವುದಿಲ್ಲ.”

“ಇದನ್ನು ತಪ್ಪಿಸಲು ಶಾಸಕರ ಕಿರು ನಿದ್ರೆಗಾಗಿ ಪ್ರಾಯೋಗಿಕವಾಗಿ ಆಡಳಿತ ಪಕ್ಷದ ಮೊಗಸಾಲೆಯಲ್ಲಿ ಒಂದು ರಿಕ್ಲೈನರ್ ಕುರ್ಚಿ ಹಾಕಲಾಗಿದೆ. ಶಾಸಕರು ಅದರ ಮೇಲೆ ಕಿರು ನಿದ್ರೆ ಮಾಡಿ ಸದನಕ್ಕೆ ಬರಬಹುದು. ಆ ರಿಕ್ಲೈನರ್​ ಕುರ್ಚಿ ನಿಮಗೆ ಸರಿ ಅನಿಸಿದರೆ ಮುಂದಿನ ಅಧಿವೇಶನದಲ್ಲಿ ಈ ವ್ಯವಸ್ಥೆಯನ್ನು ಅಧಿಕೃತ್ಯವಾಗಿ ಜಾರಿಗೆ ತರುತ್ತೇನೆ” ಎಂದು ಸಭಾಧ್ಯಕ್ಷ ಯುಟಿ ಖಾದರ್​ ಸದಸ್ಯರಿಗೆ ಹೇಳಿದರು.

ಕೆಲ ಶಾಸಕರು ಮಧ್ಯಾಹ್ನ ಊಟದ ಬಳಿಕ ಶಾಸಕರ ಭವನದ ಕೊಠಡಿಗೆ ಹೋಗುತ್ತಿದ್ದರು. ಶಾಸಕರ ಭವನದ ಕೊಠಡಿಗೆ ಹೋಗಿ ನಿದ್ದೆ ಮಾಡಿ, ಶಾಸಕರು ವಾಪಸ್ ಸದನಕ್ಕೆ ಬರುತ್ತಿರಲಿಲ್ಲ. ಇದರಿಂದ ಶಾಸಕರ ಹಾಜರಾತಿ ಕಡಿಮೆ ಇರುತ್ತಿತ್ತು. ಇದನ್ನು ತಪ್ಪಿಸಲು ಸಭಾಧ್ಯಕ್ಷ ಯುಟಿ ಖಾದರ್ ಈ ಪ್ರಯೋಗಕ್ಕೆ ಕೈ ಹಾಕಿದ್ದಾರೆ.

WhatsApp Group Join Now
Telegram Group Join Now
Share This Article