ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಮುಂದುವರೆದಿದೆ. ಜುಲೈ 24ರವರೆಗೆ ಇದೇ ಪರಿಸ್ಥಿತಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಬೆಳಗಾವಿಗೆ ಆರೆಂಜ್ ಅಲರ್ಟ್ ಇದೆ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಎಚ್ಎಎಲ್ನಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಆಗುಂಬೆ, ಕ್ಯಾಸಲ್ರಾಕ್, ಕಾರ್ಕಳ, ಗೇರುಸೊಪ್ಪ, ಕೊಟ್ಟಿಗೆಹಾರ, ಉಡುಪಿ, ಮಂಗಳೂರು ವಿಮಾನ ನಿಲ್ದಾಣ, ಸಿದ್ದಾಪುರ, ಅಂಕೋಲಾ, ಗೋಕರ್ಣ, ಕಳಸ, ಮೂರ್ನಾಡು, ನಾಪೋಕ್ಲು, ಕೊಲ್ಲೂರು, ಕದ್ರಾ, ಕೊಪ್ಪ, ಕೋಟ, ಧರ್ಮಸ್ಥಳ, ಕುಮಟಾ, ಲಿಂಗನಮಕ್ಕಿಯಲ್ಲಿ ಭಾರಿ ಮಳೆಯಾಗಿದೆ.
ಶಿರಾಲಿ, ಬೆಳ್ತಂಗಡಿ, ಕುಂದಾಪುರ, ಬನವಾಸಿ, ಸಿದ್ದಾಪುರ, ಜಯಪುರ, ಸೋಮವಾರಪೇಟೆ, ಕಾರವಾರ, ಮುಲ್ಕಿ, ಉಪ್ಪಿನಂಗಡಿ, ಸುಳ್ಯ, ಪುತ್ತೂರು, ಲೋಂಡಾ, ಕಮ್ಮರಡಿ, ಹುಂಚದಕಟ್ಟೆ, ಶೃಂಗೇರಿ, ಯಲ್ಲಾಪುರ, ತ್ಯಾಗರ್ತಿ, ಮಂಗಳೂರು, ಶೃಂಗೇರಿ, ಮಾಣಿ, ಪಣಂಬೂರು, ಮೂಡಿಗೆರೆಯಲ್ಲಿ ಮಳೆಯಾಗಿದೆ.