ಇಂದಿನಿಂದ ಕರ್ನಾಟಕದಾದ್ಯಂತ ಮತ್ತಷ್ಟು ವರುಣನ ಆರ್ಭಟ ; 5 ಜಿಲ್ಲೆಗಳಿಗೆ ರೆಡ್ ಅಲರ್ಟ್​

Ravi Talawar
ಇಂದಿನಿಂದ ಕರ್ನಾಟಕದಾದ್ಯಂತ ಮತ್ತಷ್ಟು ವರುಣನ ಆರ್ಭಟ ; 5 ಜಿಲ್ಲೆಗಳಿಗೆ ರೆಡ್ ಅಲರ್ಟ್​
WhatsApp Group Join Now
Telegram Group Join Now

ಇಂದಿನಿಂದ ಕರ್ನಾಟಕದಾದ್ಯಂತ ವರುಣನ ಆರ್ಭಟ ಮತ್ತಷ್ಟು ಹೆಚ್ಚಾಗಲಿದ್ದು, 5 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ. ಹಾಸನ, ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್​, ಬೆಳಗಾವಿ, ಮೈಸೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆಯಲ್ಲೂ ಮಳೆಯಾಗಲಿದೆ.

ಕಳಸ, ನಾಪೊಕ್ಲು, ಧರ್ಮಸ್ಥಳ, ಕೊಪ್ಪ, ಪೊನ್ನಂಪೇಟೆ, ಕ್ಯಾಸಲ್​ರಾಕ್, ಮೂರ್ನಾಡು, ಭಾಗಮಂಡಲ, ಕೊಟ್ಟಿಗೆಹಾರ, ಮಾಣಿ, ಸುಳ್ಯ, ಬೆಳ್ತಂಗಡಿ, ಜಯಪುರ, ಯಲ್ಲಾಪುರ, ಉಪ್ಪಿನಂಗಡಿ, ಕೊಲ್ಲೂರು, ಆನವಟ್ಟಿ, ಸೋಮವಾರಪೇಟೆ, ಎನ್​ಆರ್​ಪುರ, ಕದ್ರಾ, ಪುತ್ತೂರು, ಸಿದ್ದಾಪುರ, ಕಾರ್ಕಳ, ಬಾಳೆಹೊನ್ನೂರಿನಲ್ಲಿ ಮಳೆಯಾಗಿದೆ.

WhatsApp Group Join Now
Telegram Group Join Now
Share This Article