ಸಿಸಿಬಿ ಪೊಲೀಸ್ ಇನ್ಸ್​ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆ

Ravi Talawar
ಸಿಸಿಬಿ ಪೊಲೀಸ್ ಇನ್ಸ್​ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆ
WhatsApp Group Join Now
Telegram Group Join Now

ರಾಮನಗರ: ಸಿಸಿಬಿ ಪೊಲೀಸ್ ಇನ್ಸ್​ಪೆಕ್ಟರ್ ತಿಮ್ಮೇಗೌಡ ಅವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆ ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ತಗಚಕುಪ್ಪೆಯಲ್ಲಿ ನಡೆದಿದೆ.

ಬೆಂಗಳೂರು ಸಿಸಿಬಿ ಅಪರಾಧ ವಿಭಾಗದಲ್ಲಿ ಪೊಲೀಸ್ ಇನ್ಸ್​ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ತಿಮ್ಮೇಗೌಡ ಅವರು ಕುಂಬಳಗೂಡು ಬಳಿಯ ಖಾಸಗಿ ಲೇಔಟ್ ನಲ್ಲಿರುವ ಮರವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.

ಮೃತರು ಈ ಹಿಂದೆ ಬಿಡದಿ, ಮೈಸೂರು ಜಿಲ್ಲೆಯ ಹಲವು ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಇನ್ಸ್‌ಪೆಕ್ಟರ್ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಇವರು ಮೂಲತಃ ಚನ್ನಪಟ್ಟಣ ತಾಲೂಕಿನವರಾಗಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
Share This Article