ಭಾರತ ದೇಶದ ಸಂಸ್ಕೃತಿ ಜಗತ್ತಿಗೆ ಮಾದರಿ: ಮಹಾಂತೇಶ ದೊಡ್ಡಗೌಡರ

Ravi Talawar
ಭಾರತ ದೇಶದ ಸಂಸ್ಕೃತಿ ಜಗತ್ತಿಗೆ ಮಾದರಿ: ಮಹಾಂತೇಶ ದೊಡ್ಡಗೌಡರ
WhatsApp Group Join Now
Telegram Group Join Now

ಚನ್ನಮ್ಮನ ಕಿತ್ತೂರು: ಅಖಂಡ ಭಾರತ ದೇಶದ ಸಂಸ್ಕೃತಿ, ತತ್ವ, ಸಿದ್ಧಾಂತ ಜಾಗತಿಕ ಮಟ್ಟದಲ್ಲಿ ತನ್ನ ಪ್ರಭುದ್ಧತೆ ಮೆರೆದು ಮುನ್ನಡೆಯುತ್ತಿದೆ ಎಂದು ಮಾಜಿ ಶಾಸಕರು, ಬಿಡಿಸಿಸಿ ಬ್ಯಾಂಕ ನಿರ್ದೇಶಕರಾದ ಮಹಾಂತೇಶ ದೊಡ್ಡಗೌಡರ ಹೇಳಿದರು.

ಅವರು ಪಟ್ಟಣದ ತಾಯಿ ಚನ್ನಾಮಾಜಿ ಪುತ್ತಳಿ ಹತ್ತಿರ ವಿಶ್ವ ಹಿಂದೂ ಪರಿಷತ್, ಭಜರಂಗದಳ ಹಾಗೂ ಬಿಜೆಪಿ ವತಿಯಿಂದ ದಿ. 14 ರ ರಾತ್ರಿ 78 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಅಖಂಡ ಭಾರತ ದಿವಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ಸಂದರ್ಭದಲ್ಲಿ ಹುಣಶೀಕಟ್ಟಿಯ ಶ್ರೀ ಗುರು ಚನ್ನಬಸವ ದೇವರು,ಭಜರಂಗದಳದ ಸಂಚಾಲಕರು ಪ್ರಮೋದಕುಮಾರ ವಕ್ಕುಂದಮಠ, ಬಿಜೆಪಿ ಮಂಡಲ ಅಧ್ಯಕ್ಷ ಹಾಗೂ ಕೆ ಎಮ್ ಎಫ್ ನಿರ್ದೇಶಕ ಬಸವರಾಜ ಪರವಣ್ಣವರ, ಬಸನಗೌಡ ಸಿದ್ರಾಮನಿ,ರಾಜ್ಯ ಯುವ ಮೋರ್ಚಾ ಬಿಜೆಪಿ ಉಪಾಧ್ಯಕ್ಷ ಮಲ್ಲಿಕಾರ್ಜುನ ಬಾಳಿಕಾಯಿ,ಕೃಷ್ಣ ಭಟ್ ಸೇರಿದಂತೆ ಭಜರಂಗ ದಳ, ವಿಶ್ವ ಹಿಂದೂ ಪರಿಷತ್ತಿನ ಪದಾಧಿಕಾರಿಗಳು, ಸದಸ್ಯರು, ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article