ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಾಳಾದರೆ ಸಿದ್ದರಾಮಯ್ಯ ನೇರ ಹೊಣೆ: ಆರ್.ಅಶೋಕ್

Ravi Talawar
ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಾಳಾದರೆ ಸಿದ್ದರಾಮಯ್ಯ ನೇರ ಹೊಣೆ: ಆರ್.ಅಶೋಕ್
WhatsApp Group Join Now
Telegram Group Join Now

ಬೆಂಗಳೂರು: ಸಿದ್ದರಾಮಯ್ಯನವರೇ, ನಿಮ್ಮ ನೇತೃತ್ವದಲ್ಲಿ ಇಷ್ಟೊಂದು ಲೂಟಿ ಆಗ್ತಿದೆ. ಇಂದು ಜನ ಪ್ರಶ್ನಿಸುತ್ತಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಇಂದು ಬಿಜೆಪಿ-ಜೆಡಿಎಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿಧಾನಸಭೆಯಲ್ಲಿ ಚರ್ಚೆ ಮಾಡಲು ನಾವು ನಿಲುವಳಿ ಸೂಚನೆ ಮಂಡನೆ ಮಾಡಿದ್ದೆವು. ನಾವೇನು ನಿಮಗೆ ಬಹುಮತ ಇಲ್ಲ ಅಂತ ಕೇಳಿರಲಿಲ್ಲ. ಬಹುಮತ ತೆಗೆದುಕೊಂಡು ಏನು ಮಾಡ್ತೀರಿ? ಕಾನೂನಾತ್ಮಕವಾಗಿ ನಾವು ಮೊದಲ ಪ್ರಶ್ನೆ ಕೇಳಿದ್ವಿ. ಸದನದಲ್ಲಿ 224 ಶಾಸಕರು, ಅಧಿಕಾರಗಳು, ಮಾಧ್ಯಮದವರಿದ್ದರು. ಅದು ಬಿಟ್ಟು ಹೇಳಿಕೆ ಕೊಡದೇ ಓಡಿಹೋದ್ರಿ. ಸರ್ಕಾರದ ಅಧಿಕಾರ ಬಳಸಿಕೊಂಡು, ನಮಗಿಂತ ಮೊದಲು ಹೋಗಿ ಭಾಷಣ ಮಾಡಿದ್ರಲ್ಲ, ಯಾವ ನ್ಯಾಯ ಎಂದು ಟೀಕಿಸಿದರು.

ಡಿ.ಕೆ.ಶಿವಕುಮಾರ್ ಒಬ್ಬರು ಉಪ ಮುಖ್ಯಮಂತ್ರಿ. ನೀವೇ ಹೋರಾಟ ಮಾಡಿ, ಕಲ್ಲು ಹೊಡೀರಿ ಅಂತ ಹೇಳ್ತೀರಿ. ನಾವು ವಿಧಾನಸೌಧದಲ್ಲಿ ಹೋರಾಟ ಮಾಡುತ್ತಿದ್ದೆವು. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಾಳಾದ್ರೆ, ಅದಕ್ಕೆ ನೀವೇ ನೇರ ಹೊಣೆ. ರಾಷ್ಟ್ರಪತಿ ಆಡಳಿತ ಈಗಲೇ ಬರಲಿ, ಪೊಲೀಸರ ಕೈ ಕಟ್ಟಿದ್ದೀರಾ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

WhatsApp Group Join Now
Telegram Group Join Now
Share This Article