ಮೇಕೆದಾಟು ಯೋಜನೆ ಪರಿಶೀಲಿಸುವಂತೆ ಕೇಂದ್ರ ಪರಿಸರ ಸಚಿವಾಲಯಕ್ಕೆ ಮತ್ತೆ ಕರ್ನಾಟಕ ಅರ್ಜಿ

Ravi Talawar
ಮೇಕೆದಾಟು ಯೋಜನೆ ಪರಿಶೀಲಿಸುವಂತೆ ಕೇಂದ್ರ ಪರಿಸರ ಸಚಿವಾಲಯಕ್ಕೆ ಮತ್ತೆ  ಕರ್ನಾಟಕ ಅರ್ಜಿ
WhatsApp Group Join Now
Telegram Group Join Now

ಬೆಂಗಳೂರು, ಆಗಸ್ಟ್ 24: ಕರ್ನಾಟಕವು ಕಾವೇರಿ ನದಿಗೆ ಮೇಕೆದಾಟುವಿನಲ್ಲಿ ಅಣೆಕಟ್ಟೆ ನಿರ್ಮಿಸುವ ವಿಚಾರವಾಗಿ ಚರ್ಚೆ ಮತ್ತೆ ಮುನ್ನೆಲೆಗೆ ಬರುವ ಎಲ್ಲ ಸಾಧ್ಯತೆಗಳಿವೆ. ಮೇಕೆದಾಟು ಯೋಜನೆಯನ್ನು ಪರಿಶೀಲಿಸುವಂತೆ ಕೋರಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಕ್ಕೆ ಕರ್ನಾಟಕ ಸರ್ಕಾರ ಮತ್ತೆ ಅರ್ಜಿ ಸಲ್ಲಿಸಿದೆ.

ಕಾವೇರಿ ನೀರಾವರಿ ನಿಗಮ ನಿಯಮಿತದ (ನೀರಾವರಿ ದಕ್ಷಿಣ ವಲಯ) ಮುಖ್ಯ ಎಂಜಿನಿಯರ್ ಮೇ 30 ರಂದು ಸಚಿವಾಲಯದ ರಿವರ್ ವ್ಯಾಲಿ ಆ್ಯಂಡ್ ಹೈಡ್ರೋ ಎಲೆಕ್ಟ್ರಿಕ್ ಪ್ರಾಜೆಕ್ಸ್ಟ್ ಕಾರ್ಯದರ್ಶುಗೆ ನಮೂನೆ-1, ಕರಡು ವಿಸ್ತೃತ ಯೋಜನಾ ವರದಿಯ ಸಹಿತ ಅರ್ಜಿ ಸಲ್ಲಿಸಿರುವುದು ಲಭ್ಯವಿರುವ ದಾಖಲೆಗಳಿಂದ ತಿಳಿದುಬಂದಿದೆ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಸಚಿವಾಲಯವು ಜುಲೈ 2 ರಂದು ಅಗತ್ಯ ವಿವರಗಳನ್ನು ಕೇಳಿತ್ತು. ಡಿಪಿಆರ್ ಅನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಅನುಮೋದಿಸಿದೆಯೇ? ನ್ಯಾಯಾಲಯದ ಪ್ರಕರಣಗಳ ವಿವರಗಳು ಮತ್ತು ಅಂತರರಾಜ್ಯ ಸಮಸ್ಯೆಗಳಿಗೆ ಸಂಬಂಧಿಸಿದ ಕ್ಲಿಯರೆನ್ಸ್ ಸಲ್ಲಿಸುವಂತೆ ಸೂಚಿಸಿತ್ತು. ಇದಕ್ಕೆ ಕರ್ನಾಟಕ ಸರ್ಕಾರ ಜುಲೈ 9 ರಂದು ಪ್ರತಿಕ್ರಿಯೆಯನ್ನು ಕಳುಹಿಸಿದೆ ಎಂದು ವರದಿ ಉಲ್ಲೇಖಿಸಿದೆ.

ಯೋಜನೆಯ ವಿವಿಧ ತಾಂತ್ರಿಕ ಮತ್ತು ಆರ್ಥಿಕ ಅಂಶಗಳ ಪರಿಶೀಲನೆಗಾಗಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮೇಕೆದಾಟು ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಜಲ ಆಯೋಗಕ್ಕೆ ಹಿಂದಿರುಗಿಸಿದೆ ಎಂದು ಪ್ರತಿಕ್ರಿಯೆಯಲ್ಲಿ ತಿಳಿಸಲಾಗಿತ್ತು.

WhatsApp Group Join Now
Telegram Group Join Now
Share This Article