ಕರ್ನಾಟಕದ 11ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಸೆ.2ರವರೆಗೆ ಭಾರಿ ಮಳೆ

Ravi Talawar
ಕರ್ನಾಟಕದ 11ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಸೆ.2ರವರೆಗೆ ಭಾರಿ ಮಳೆ
WhatsApp Group Join Now
Telegram Group Join Now

ಕರ್ನಾಟಕದ ಕರಾವಳಿಯಲ್ಲಿ ಮತ್ತೆ ಮಳೆ ಶುರುವಾಗಿದೆ, ಸೆಪ್ಟೆಂಬರ್ 2ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಹಾಸನ, ವಿಜಯಪುರ, ಯಾದಗಿರಿ, ಕಲಬುರಗಿ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೀದರ್, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಕದ್ರಾ, ಕ್ಯಾಸಲ್​ರಾಕ್, ಲೋಂಡಾ, ಭಾಗಮಂಡಲ, ಯಲ್ಲಾಪುರ, ಹುಂಚದಕಟ್ಟೆ, ಮೂಡಿಗೆರೆ, ಸಿದ್ದಾಪುರ, ಗೇರುಸೊಪ್ಪ, ಬೆಳಗಾವಿ, ಅಂಕೋಲಾ, ಧರ್ಮಸ್ಥಳ, ಮಂಕಿ, ನಿಪ್ಪಾಣಿ, ಕಮ್ಮರಡಿ, ಆಗುಂಬೆ, ಲಿಂಗನಮಕ್ಕಿ, ಕುಮಟಾ, ಬೆಳ್ತಂಗಡಿ, ಮಾಣಿ, ಜೋಯಿಡಾ, ಕಿರವತ್ತಿ, ಸುಳ್ಯ, ಸಂಕೇಶ್ವರ, ಹೊನ್ನಾವರ, ಬನವಾಸಿ, ಗೋಕರ್ಣ, ಹಳಿಯಾಳ, ಚಿಕ್ಕೋಡಿ, ಸೇಡಬಾಳ, ಕಳಸ, ಕೊಪ್ಪ, ಭದ್ರಾವತಿ, ಶೃಂಗೇರಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಿದೆ.

WhatsApp Group Join Now
Telegram Group Join Now
Share This Article