16ನೇ ಹಣಕಾಸು ಆಯೋಗ ಅನುದಾನ ಹಂಚಿಕೆ; ಪಾರದರ್ಶಕತೆಗೆ ಸಿಎಂ ಸಿದ್ದರಾಮಯ್ಯ ಮನವಿ

Ravi Talawar
16ನೇ ಹಣಕಾಸು ಆಯೋಗ ಅನುದಾನ ಹಂಚಿಕೆ; ಪಾರದರ್ಶಕತೆಗೆ ಸಿಎಂ ಸಿದ್ದರಾಮಯ್ಯ ಮನವಿ
WhatsApp Group Join Now
Telegram Group Join Now

ಬೆಂಗಳೂರು: 16ನೇ ಹಣಕಾಸು ಆಯೋಗ ಅನುದಾನ ಹಂಚಿಕೆ ಸಮತೋಲಿತ ಹಾಗೂ ಪಾರದರ್ಶಕತೆಯಿಂದ ಕೂಡಲಿ ಎಂಬುದು ರಾಜ್ಯದ ನಿರೀಕ್ಷೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ 16ನೇ ಹಣಕಾಸು ಆಯೋಗದ ಜೊತೆಗಿನ ಸಭೆಯಲ್ಲಿ ಮನವಿ ಮಾಡಿದ್ದಾರೆ.

ಗುರುವಾರ ಖಾಸಗಿ ಹೋಟೆಲ್​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 16ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ. ಅರವಿಂದ ಪನಗಾರಿಯ ಹಾಗೂ ಸದಸ್ಯರೊಂದಿಗೆ ಸಭೆ ನಡೆಸಿ ಮಾತನಾಡಿದರು. ಸಭೆಯಲ್ಲಿ ಸಚಿವ ಸಂಪುಟದ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಸರ್ಕಾರದ ಹಿರಿಯ ಅಧಿಕಾರಿಗಳು ಇದ್ದರು.

ಈ ವೇಳೆ, ಪ್ರಸ್ತಾವಿಕ ಭಾಷಣ ಮಾಡಿದ ಸಿಎಂ, ಉತ್ತಮವಾಗಿ ಪ್ರಗತಿ ಕಾಣುತ್ತಿರುವ ರಾಜ್ಯಗಳತ್ತ ಹಣಕಾಸು ಆಯೋಗ ಹೆಚ್ಚಿನ ಸಮಾನ ಆದ್ಯತೆ ನೀಡುವ ಅಗತ್ಯ ಇದೆ. ಪ್ರಗತಿಶೀಲ ರಾಜ್ಯಗಳ ಜನತೆ ತಮ್ಮ ತೆರಿಗೆ ಹಣದಿಂದ ರಾಜ್ಯಕ್ಕೆ ಅನುಕೂಲಕರವಾಗಿರಬೇಕು ಎಂಬ ನಿರೀಕ್ಷೆ ಹೊಂದಿದ್ದಾರೆ ಎಂದು ತಿಳಿಸಿದರು.

WhatsApp Group Join Now
Telegram Group Join Now
Share This Article