ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಿದ್ದ ಆರ್​ಟಿಐ ಕಾರ್ಯಕರ್ತನಿಗೆ ಜೀವ ಬೆದರಿಕೆ

Ravi Talawar
ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಿದ್ದ ಆರ್​ಟಿಐ ಕಾರ್ಯಕರ್ತನಿಗೆ ಜೀವ ಬೆದರಿಕೆ
WhatsApp Group Join Now
Telegram Group Join Now

ಮೈಸೂರು, ಸೆಪ್ಟೆಂಬರ್​ 02: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಬದಲಿ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದ ಆರ್​​ಟಿಐ  ಕಾರ್ಯಕರ್ತ ಗಂಗರಾಜು  ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಹೀಗಾಗಿ, ಗಂಗರಾಜು ಅವರು ಓರ್ವ ಗನ್ ಮ್ಯಾನ್‌ ನೀಡುವಂತೆ ಮುಖ್ಯಮಂತ್ರಿಗಳ ಕಾರ್ಯಾಲಯಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಆರ್​ಟಿಐ ಕಾರ್ಯಕರ್ತ ಗಂಗರಾಜು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್​ ನಾಯಕರು ಆರೋಪಿಸಿದ್ದರು. ಅಲ್ಲದೇ, ಇವರನ್ನು ಕೂಡಲೇ ಬಂಧಿಸಬೇಕೆಂದು ಮೈಸೂರು ಜಿಲ್ಲಾ ಪೊಲೀಸ್​ ಆಯುಕ್ತರಿಗೆ ಕಾಂಗ್ರೆಸ್​​ ನಿಯೋಗ ದೂರು ನೀಡಿತ್ತು.
WhatsApp Group Join Now
Telegram Group Join Now
Share This Article