ಶಿವಮೊಗ್ಗ, ಸೆಪ್ಟೆಂಬರ್ 5: ಕೋವಿಡ್ ಹಗರಣದ ತನಿಖಾ ವರದಿಯಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಸಂಪುಟದಲ್ಲಿ ಚರ್ಚೆಯಾಗಲಿದೆ ಎಂದು ಮಾಧ್ಯಮಗಳ ವರದಿಯಲ್ಲಿ ನೋಡಿದ್ದೇನೆ. ಕೆಂಪಣ್ಣ ಆಯೋಗದ ವರದಿ ಬಗ್ಗೆಯೂ ಸಂಪುಟದಲ್ಲಿ ಚರ್ಚಿಸಲಿ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹೇಳಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಅದನ್ನು (ಕೆಂಪಣ್ಣ ಆಯೋಗದ ವರದಿ) ಏಕೆ ಕ್ಯಾಬಿನೆಟ್ ಮುಂದೆ ತರದೆ ಬಿಟ್ಟಿದ್ದಾರೆ ಎಂದು ಪ್ರಶ್ನಿಸಿದರು.
ನಾಡಿಗೆ ಅನೇಕ ಕೊಡುಗೆಗಳನ್ನು ಎನ್ಯು ಆಸ್ಪತ್ರೆ ಕೊಟ್ಟಿದೆ. ಶಿವಮೊಗ್ಗದಲ್ಲಿ ಹಲವಾರು ಕುಟುಂಗಳಿಗೆ ಯಶಸ್ವಿಯಾಗಿ ಕಿಡ್ನಿ ಕಸಿ ಮಾಡಿದ್ದಾರೆ. ಶಿವಮೊಗ್ಗಕ್ಕೆ ಇಂತಹ ಒಂದು ಆಸ್ಪತ್ರೆ ಅವಶ್ಯಕವಾಗಿತ್ತು. ಇಲ್ಲವಾದರೆ ಬೆಂಗಳೂರು ಅಥವಾ ಮಂಗಳೂರಿಗೆ ಆಸ್ಪತ್ರೆಗೆ ಹೋಗಬೇಕಿತ್ತು. ಇದೀಗ ಆ ಸೌಲಭ್ಯ ಶಿವಮೊಗ್ಗದಲ್ಲಿ ದೊರೆಯುತ್ತಿದೆ ಎಂದರು.