ನಾಳೆ ಜಗದ್ಗುರು ರೇಣುಕಾಚಾರ್ಯ ಮಂದಿರ ಕಟ್ಟಡ ಪ್ರಾರಂಭೋತ್ಸವ ಮತ್ತು ಧರ್ಮ ಸಮಾರಂಭ

Ravi Talawar
ನಾಳೆ ಜಗದ್ಗುರು ರೇಣುಕಾಚಾರ್ಯ ಮಂದಿರ ಕಟ್ಟಡ ಪ್ರಾರಂಭೋತ್ಸವ ಮತ್ತು ಧರ್ಮ ಸಮಾರಂಭ
WhatsApp Group Join Now
Telegram Group Join Now

ರಾಮದುರ್ಗ: ತಾಲೂಕಿನ ಗೊಡಚಿ ವೀರಭದ್ರೇಶ್ವರ ಕ್ಷೇತ್ರದ ಗೊಡಚಿ-ಸಾಲಹಳ್ಳಿ ವೀರಭದ್ರ ಶಿವಯೋಗಿ ಶಿವಾಚಾರ್ಯರ ಸಂಕಲ್ಪದಂತೆ ನಿರ್ಮಾಣಗೊಂಡಿರುವ ಶ್ರೀ ಜಗದ್ಗುರು ರೇಣುಕಾಚಾರ್ಯ ಮಂದಿರ, ಶ್ರೀ ರಂಭಾಪುರಿ ಪೀಠದ ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ, ಶ್ರೀರಂಭಾಪುರಿ ಜಗದ್ಗುರು ವೀರಸೋಮೇಶ್ವರ ಜ್ಞಾನ ಮಂಟಪ ಪ್ರಾರಂಭೋತ್ಸವ ಹಾಗೂ ಶ್ರೀ ವೀರಭದ್ರೇಶ್ವರ ಜಯಂತಿ ಧರ್ಮ ಸಮಾರಂಭ ಸೆಪ್ಟೆಂಬರ್ ೧೦ರಂದು ಬೆಳಿಗ್ಗೆ ೧೦.೩೦ಕ್ಕೆ ನಡೆಯಲಿದೆ.

ಸಮಾರಂಭವನ್ನು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಉದ್ಘಾಟಿಸಲಿದ್ದಾರೆ. ದಿವ್ಯ ಸಾನಿಧ್ಯವನ್ನು ಬಾಳೆಹೊನ್ನೂರಿನ ರಂಭಾಪುರಿ ಪೀಠದ ೧೦೦೮ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ಶ್ರೀಗಳು ವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ವಹಿಸಿಕೊಳ್ಳಲಿದ್ದಾರೆ. ಅತಿಥಿಗಳಾಗಿ ಜಿಲ್ಲೆಯ ವಿವಿಧ ಪೀಠಗಳ ಪೀಠಾಧಿಪತಿಗಳು, ಅನೇಶ ಪೂಜ್ಯರು, ಅಧಿಕಾರಿಗಳು, ಶರಣರು ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ.

ಕ್ಷೇತ್ರಾಭಿವೃದ್ಧಿಗೆ ಪುರೋಹಿತರಿಂದ ಮತ್ತು ಪಾಠಶಾಲಾ ವಟುಗಳಿಂದ ಶ್ರೀರುದ್ರ ಹೋಮ ಮತ್ತು ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

WhatsApp Group Join Now
Telegram Group Join Now
Share This Article