BJP ಅವಧಿಯ ಅಕ್ರಮ ಆರೋಪಗಳ ತನಿಖೆ ಚುರುಕು, ಪರಮೇಶ್ವರ್ ನೇತೃತ್ವದಲ್ಲಿ ಸಮಿತಿ ರಚನೆ

Ravi Talawar
BJP ಅವಧಿಯ ಅಕ್ರಮ ಆರೋಪಗಳ ತನಿಖೆ ಚುರುಕು, ಪರಮೇಶ್ವರ್ ನೇತೃತ್ವದಲ್ಲಿ ಸಮಿತಿ ರಚನೆ
WhatsApp Group Join Now
Telegram Group Join Now

ಬೆಂಗಳೂರು: ಮುಡಾ ಹಗರಣವನ್ನು ಸಿದ್ದರಾಮಯ್ಯ ತಲೆಗೆಕಟ್ಟಿ ಅಧಿಕಾರದಿಂದ ಕೆಳಗಿಳಿಸಬೇಕು ಎನ್ನುವ ಹುಮ್ಮಸ್ಸಿನಲ್ಲಿದ್ದ ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಕು ಬಹುದೊಡ್ಡ ಖೆಡ್ಡಾ ಹೂಡಿದ್ದಾರೆ.

ಮುಡಾ ಪ್ರಕರಣ ಸೇರಿದಂತೆ ಕಾಂಗ್ರೆಸ್ ಸರ್ಕಾರದ ಹಲವು ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಲು ಹೋರಾಟಕ್ಕೆ ಇಳಿದಿರುವ ಬಿಜೆಪಿ ನಾಯಕರ ಭ್ರಷ್ಟಾಚಾರದ ಪ್ರಕರಣಗಳ ಮೇಲೆ ಬೆಳಕು ಚೆಲ್ಲಿ, ಕಾನೂನು ಕುಣಿಕೆಗೆ ಸಿಲುಕಿಸಲು ಸಿದ್ದರಾಮಯ್ಯ ಅವರು ಸಜ್ಜಾಗಿದ್ದು, ಭ್ರಷ್ಟಾಚಾರ ಆರೋಪ ಹೊತ್ತ ಬಿಜೆಪಿ ನಾಯಕರ ವಿರುದ್ಧದ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಬಿಜೆಪಿ ಆಡಳಿತ ಅವಧಿಯಲ್ಲಿ ನಡೆದ ಅಕ್ರಮಗಳು ಕುರಿತು ತನಿಖೆ ನಡೆಸಲು ಐವರು ಸಚಿವರ ಸಮಿತಿ ರಚಿಸಿದ್ದಾರೆ.

ಬಿಜೆಪಿ ಆಡಳಿತ ಅವಧಿಯಲ್ಲಿ ನಡೆದ ಅಕ್ರಮಗಳು ಸೇರಿ ಒಟ್ಟು 26 ಹಗರಣಗಳ ಕುರಿತು ತನಿಖೆ ನಡೆಸಲು ಗೃಹ ಸಚಿವ ಜಿ.ಪರಮೇಶ್ವರ್ ನೇತೃತ್ವದ ಸಮಿತಿ ರಚಿಸಿದ್ದಾರೆ. ಸಮಿತಿಯಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಹಾಗೂ ಸಂತೋಷ್ ಲಾಡ್ ಇದ್ದಾರೆಂದು ತಿಳಿದುಬಂದಿದೆ.

WhatsApp Group Join Now
Telegram Group Join Now
Share This Article