ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಸದಸ್ಯತ್ವ ಅಭಿಯಾನ ಯಶಸ್ವಿಗೊಳಿಸಿ. ಸುನೀಲಕುಮಾರ 

Ravi Talawar
ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಸದಸ್ಯತ್ವ ಅಭಿಯಾನ ಯಶಸ್ವಿಗೊಳಿಸಿ. ಸುನೀಲಕುಮಾರ 
WhatsApp Group Join Now
Telegram Group Join Now
 ಬೆಳಗಾವಿ. ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಚಿವರಾದ ಸುನಿಲ್ ಕುಮಾರ್ ಮಾತನಾಡಿ ಸದಸ್ಯತ್ವ ಅಭಿಯಾನದಲ್ಲಿ ಎಲ್ಲಾ ಭಾ.ಜ.ಪಾ  ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿ ಬೂತ್ ಮಟ್ಟದಲ್ಲಿ ಸದಸ್ಯತ್ವ ಅಭಿಯಾನ ಯಶಸ್ವಿಗೊಳಿಸಬೇಕೆಂದು ಹೇಳಿದರು.
         ಸಂಸದ ಜಗದೀಶ್ ಶೆಟ್ಟರ್ ಹಾಗೂ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ ಮಾತನಾಡಿ ಈ ಸದಸ್ಯತಾ ಅಭಿಯಾನವು ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಈ ಸದಸ್ಯತ್ವ ಅಭಿಯಾನದಲ್ಲಿ ರಾಜ್ಯದಲ್ಲಿಯೇ ಬೆಳಗಾವಿ ಗ್ರಾಮಂತರ ಜಿಲ್ಲೆಗೆ ಮೊದಲ ಸ್ಥಾನದಲ್ಲಿ ಮುನ್ನಡೆಯುವಂತೆ ಎಲ್ಲರೂ ಶ್ರಮಿಸಬೇಕೆಂದು ಕರೆ ನೀಡಿದರು.ಇದೇ ಸಂದರ್ಭದಲ್ಲಿ ನೂತನ ಮಂಡಲ ಅಧ್ಯಕ್ಷರುಗಳಿಗೆ ಪ್ರಮಾಣ ಪತ್ರವನ್ನು  ವಿತರಿಸಿದರು.
       ಈ ಸಂದರ್ಭದಲ್ಲಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ರಾಜ್ಯ ಉಪಾಧ್ಯಕ್ಷರಾದ ಅನಿಲ್  ಬೆನಕೆ, ವಿಠ್ಠಲ್ ಹಲಗೆಕರ್, ಹನುಮಂತ್ ನಿರಾಣಿ, ಮಂಗಲ ಅಂಗಡಿ, ಮಾಜಿ ಶಾಸಕರಾದ ಸಂಜಯ್ ಪಾಟೀಲ್, ಜಗದೀಶ್ ಮೆಟಗುಡ್ಡ, ಮಹಾಂತೇಶ್ ದೊಡ್ಡಗೌಡರ್, ಮಹಾಂತೇಶ್ ಕವಟಗಿಮಠ, ಅರವಿಂದ ಪಾಟೀಲ್, ರತ್ನಕ್ಕಾ ಮಾಮನಿ ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು
WhatsApp Group Join Now
Telegram Group Join Now
Share This Article