ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರ ಪ್ಲೆಕ್ಸ್; ಕ್ರಮಕ್ಕೆ ಮಾಜಿ ಗೃಹ ಸಚಿವ ಆಗ್ರಹ

Ravi Talawar
ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರ ಪ್ಲೆಕ್ಸ್; ಕ್ರಮಕ್ಕೆ ಮಾಜಿ ಗೃಹ ಸಚಿವ ಆಗ್ರಹ
WhatsApp Group Join Now
Telegram Group Join Now

ಶಿವಮೊಗ್ಗ, ಸೆ.18: ಹಿಂದೂ ಮತ್ತು ಮುಸ್ಲೀಮರ ಧಾರ್ಮಿಕ ಸ್ಥಳವಾಗಿರುವ ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ (Palestine) ಪರವಾಗಿ ಹಾಕಿರುವ ಪ್ಲೆಕ್ಸ್ ಈಗ ವಿವಾದಕ್ಕೆ ಕಾರಣವಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯಲ್ಲಿ ನಿನ್ನೆ ಪ್ಯಾಲೆಸ್ತೀನ್ ಪರವಾದ ಪ್ಲೇಕ್ಸ್ ಕಟ್ಟಲಾಗಿತ್ತು. ಇದಕ್ಕೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ (Argha Gnanendra) ಅವರು ಆಕ್ರೋಶ ವ್ಯಕ್ತಪಡಿಸಿದ್ದು ಕಿಡಿಗೇಡಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪ್ರಕರಣ ಸಂಬಂಧ ಶಿವಮೊಗ್ಗ ಎಸ್ಪಿಯವರಿಗೆ ಪತ್ರ ಬರೆದಿದ್ದಾರೆ. ಸದ್ಯ ಮುಂಜಾಗ್ರತ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ.

WhatsApp Group Join Now
Telegram Group Join Now
Share This Article