ಮುನಿರತ್ನ ಕೇಸ್ ತನಿಖೆಗೆ ಎಸ್‌ಐಟಿ ಸ್ವತಂತ್ರ: ಸಿಎಂ ಸಿದ್ದರಾಮಯ್ಯ

Ravi Talawar
ಮುನಿರತ್ನ ಕೇಸ್ ತನಿಖೆಗೆ ಎಸ್‌ಐಟಿ ಸ್ವತಂತ್ರ: ಸಿಎಂ ಸಿದ್ದರಾಮಯ್ಯ
WhatsApp Group Join Now
Telegram Group Join Now

ಕೊಪ್ಪಳ: ಬಿಜೆಪಿ ಶಾಸಕ ಮುನಿರತ್ನ ಬಂಧನ ಪ್ರಕರಣಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಮುನಿರತ್ನ ಅವರು ಸಾಕಷ್ಟು ಕಾನೂನು ಉಲ್ಲಂಘನೆ ಮಾಡಿದ್ದಾರೆ. ಹಾಗಾಗಿ ಎಫ್ಐಆರ್ ದಾಖಲಾಗಿದೆ. ತನಿಖೆಗೆ ಎಸ್ಐಟಿ ರಚನೆ ಮಾಡಲಾಗಿದೆ. ಅವರಿಗೆ ಕಾನೂನು ಉಲ್ಲಂಘಿಸಿ ಎಂದು ನಾವು ಹೇಳಿಲ್ಲವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲು ಭಾನುವಾರ ತಾಲೂಕಿನ ಬಸಾಪೂರ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ನಾವು ಯಾರ ವಿರುದ್ಧವೂ ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಮುನಿರತ್ನನಿಗೆ ಅಪರಾಧ ಮಾಡು ಎಂದು ನಾವು ಹೇಳಿದ್ದೆವಾ?…ಮುನಿರತ್ನ ಮೇಲೆ ಮೂರು ಪ್ರಕರಣ ದಾಖಲಾಗಿದೆ. ಶಾಸಕರ ಮನವಿ ಮೇರೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ, ಅತ್ಯಾಚಾರ ಮತ್ತು ಹನಿ ಟ್ರ್ಯಾಪಿಂಗ್ ಆರೋಪದ ಮೇಲೆ ಕಾನೂನು ಪ್ರಕಾರ ಮುನಿರತ್ನ ಅವರನ್ನು ಬಂಧಿಸಲಾಗಿದೆ, ನಿವೃತ್ತ ಐಪಿಎಸ್ ಅಧಿಕಾರಿ ಬಿಕೆ ಸಿಂಗ್ ಅವರಿಗೆ ತನಿಖೆ ನೇತೃತ್ವ ವಹಿಸಲಾಗಿದೆ.

WhatsApp Group Join Now
Telegram Group Join Now
Share This Article