ಅರ್ಕಾವತಿ ಬಡಾವಣೆ ಡಿನೋಟಿಫೈ ಪ್ರಕರಣ; ರಾಜ್ಯಪಾಲರ ಪತ್ರಕ್ಕೆ ಸಚಿವ ಡಾ.ಪರಮೇಶ್ವರ್  ಆಕ್ರೋಶ

Ravi Talawar
ಅರ್ಕಾವತಿ ಬಡಾವಣೆ ಡಿನೋಟಿಫೈ ಪ್ರಕರಣ; ರಾಜ್ಯಪಾಲರ ಪತ್ರಕ್ಕೆ ಸಚಿವ ಡಾ.ಪರಮೇಶ್ವರ್  ಆಕ್ರೋಶ
WhatsApp Group Join Now
Telegram Group Join Now

ಬೆಂಗಳೂರು, ಸೆ.23: ಅರ್ಕಾವತಿ ಬಡಾವಣೆಗೆ ಸ್ವಾಧೀನಪಡಿಸಿದ್ದ ಜಮೀನು ಡಿನೋಟಿಫೈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡುವಂತೆ ರಾಜ್ಯಪಾಲರು  ಸರ್ಕಾರಕ್ಕೆ  ಪತ್ರ ಬರೆಯುತ್ತಿದ್ದಾರೆ. ಈ ಸಂಬಂಧ ರಾಜ್ಯಪಾಲರು ಪದೇ ಪದೆ ಸರ್ಕಾರಕ್ಕೆ ಪತ್ರ ಬರೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿ ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್  ಆಕ್ರೋಶ ಹೊರ ಹಾಕಿದ್ದಾರೆ. ಪ್ರತಿನಿತ್ಯ ಸರ್ಕಾರದ ಕಾರ್ಯದ ಬಗ್ಗೆ ರಾಜ್ಯಪಾಲರು ಮಾಹಿತಿ ಕೇಳಿದ್ದ ಸಂದರ್ಭಗಳೇ ಇಲ್ಲ. ಆದರೆ ಪ್ರತಿ ದಿನ ಪತ್ರ ಬರೆದು ಪತ್ರದ ಮೂಲಕ ಮಾಹಿತಿ ಕೊಡಿ ಅಂತಿದ್ದಾರೆ.

ರಾಜ್ಯಪಾಲರು ಹಾಗೂ ಸರ್ಕಾರದ ಮಧ್ಯೆ ಗುಡ್ ರಿಲೇಷನ್​ಶಿಪ್ ಇರುತ್ತೆ. ಆದರೆ ಹೀಗಾದರೆ ಸ್ಮೂತ್ ಆಗಿ ಆಗೋದಿಲ್ಲ. ಮುಂದೆ ಏನು ಮಾಡಬೇಕೆಂದು ಸಿಎಂ ಜತೆ ಚರ್ಚೆ ಮಾಡುತ್ತೇವೆ. ಅನಿವಾರ್ಯತೆ ಇಲ್ಲದಿದ್ದರೆ ರಾಜ್ಯಪಾಲರಿಗೆ ಉತ್ತರ ಕೊಡುವುದಿಲ್ಲ. ಯಾವುದಕ್ಕೆ ಉತ್ತರ ಕೊಡಬೇಕೋ ಕೊಡುತ್ತೇವೆ. ಸಂಪುಟದಲ್ಲಿ ರಾಜ್ಯಪಾಲರ ನಡವಳಿಕೆ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್ ಅವರು ರಾಜ್ಯಪಾಲರ ನಡೆಗೆ ಆಕ್ರೋಶ ಹೊರ ಹಾಕಿದ್ದಾರೆ.

 

WhatsApp Group Join Now
Telegram Group Join Now
Share This Article