ಅತ್ಯಾಚಾರ ಸಂತ್ರಸ್ತೆ ಪುತ್ರನಿಗೆ ಮುನಿರತ್ನ ಬೆಂಬಲಿಗರು ಬೆದರಿಕೆ ಆರೋಪ; ಇನ್ಸ್​​ಪೆಕ್ಟರ್​​ ವಿರುದ್ಧ ಸಿಎಂಗೆ ವೇಲು ದೂರು

Ravi Talawar
ಅತ್ಯಾಚಾರ ಸಂತ್ರಸ್ತೆ ಪುತ್ರನಿಗೆ ಮುನಿರತ್ನ ಬೆಂಬಲಿಗರು ಬೆದರಿಕೆ ಆರೋಪ; ಇನ್ಸ್​​ಪೆಕ್ಟರ್​​ ವಿರುದ್ಧ ಸಿಎಂಗೆ ವೇಲು ದೂರು
WhatsApp Group Join Now
Telegram Group Join Now

ಬೆಂಗಳೂರು, ಸೆಪ್ಟೆಂಬರ್ 23: ಬಿಜೆಪಿ ಶಾಸಕ ಮುನಿರತ್ನ ಮೂರು ಪ್ರಕರಣಗಳಲ್ಲಿ ಸಿಲುಕಿಕೊಂಡು  ಒದ್ದಾಡುತ್ತಿದ್ದಾರೆ. 2 ಕೇಸ್​ಗಳಿಂದ ಆಚೆ ಬಂದು ಮತ್ತೊಂದರಲ್ಲಿ ಜೈಲು ಪಾಲಾಗಿದ್ದಾರೆ. ಈ ಮಧ್ಯೆ ಅತ್ಯಾಚಾರ ಆರೋಪ ಮಾಡಿರುವ ಸಂತ್ರಸ್ತೆ ಪುತ್ರನಿಗೆ ಮುನಿರತ್ನ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ ಎನ್ನಲಾಗಿತ್ತು. ಮುನಿರತ್ನ ನಾಯ್ಡು ಬೆಂಬಲಿಗರಿಂದ ಜೀವ ಬೆದರಿಕೆ ಹಿನ್ನೆಲೆ ಮಾಜಿ ಕಾರ್ಪೊರೇಟರ್​ ವೇಲು ನಾಯಕ್ ಹಾಗೂ ದಲಿತ ಸಂಘಟನೆ ಮುಖಂಡರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ.

ಸಿಎಂ ಭೇಟಿ ಬಳಿಕ ಮಾತನಾಡಿದ ಮಾಜಿ ಕಾರ್ಪೊರೇಟರ್​ ವೇಲು ನಾಯಕ್, ಹೆಬ್ಬಗೋಡಿ ಠಾಣೆ ಪಿಐ ಐಎನ್​​ ರೆಡ್ಡಿ ಸಾಕ್ಷಿನಾಶಕ್ಕೆ ಮುಂದಾಗುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಮುನಿರತ್ನ ನಾಯ್ಡುಗೆ ಐಎನ್​ ರೆಡ್ಡಿಯಿಂದ ವಿರೋಧಿಗಳ ಫೋನ್ ಟ್ಯಾಪ್​ನಿಂದ ಹಿಡಿದು ಎಲ್ಲಾ ರೀತಿಯ ಸಹಾಯ ಮಾಡಿದ್ದಾನೆ. ಸಾಕ್ಷಿ ನಾಶಪಡಿಸುವವರಲ್ಲಿ ಇನ್ಸ್​ಪೆಕ್ಟರ್​ ಐ.ಎನ್.ರೆಡ್ಡಿ ಪ್ರಮುಖರು. ಹೀಗಾಗಿ ಅವರನ್ನು ಅಮಾನತು ಮಾಡಬೇಕು. ಜೊತೆಗೆ ಪ್ರಕರಣದ ತನಿಖೆ ತೀವ್ರಗೊಳಿಸಬೇಕು ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
Share This Article