ರಾಜ್ಯದಲ್ಲಿ ಕಾಂಗ್ರೆಸ್ ಒಂದೂವರೆ ವರ್ಷದಲ್ಲೇ ಜನರ ಹಿಡಿಶಾಪಕ್ಕೆ ಒಳಗಾಗಿದೆ: ಬಿ.ವೈ.ವಿಜಯೇಂದ್ರ

Ravi Talawar
ರಾಜ್ಯದಲ್ಲಿ ಕಾಂಗ್ರೆಸ್ ಒಂದೂವರೆ ವರ್ಷದಲ್ಲೇ ಜನರ ಹಿಡಿಶಾಪಕ್ಕೆ ಒಳಗಾಗಿದೆ: ಬಿ.ವೈ.ವಿಜಯೇಂದ್ರ
WhatsApp Group Join Now
Telegram Group Join Now

ಮಂಗಳೂರು, ಅ.15: ಹರಿಯಾಣದಲ್ಲಿ ಹಗಲುಗನಸು ಕಾಣುತ್ತಿದ್ದ ಕಾಂಗ್ರೆಸ್​​  ಸೋಲು ಕಂಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಬಿ.ವೈ.ವಿಜಯೇಂದ್ರ  ವ್ಯಂಗ್ಯವಾಡಿದ್ದಾರೆ. ಇತ್ತೀಚೆಗೆ ಹರಿಯಾಣ, ಜಮ್ಮು ಕಾಶ್ಮೀರ ಫಲಿತಾಂಶ ನಮಗೆಲ್ಲಾ ತಿಳಿದಿದೆ. ಹರಿಯಾಣದಲ್ಲಿ ಮೂರನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಕಾಶ್ಮೀರದಲ್ಲಿ ಬಿಜೆಪಿ ಅಧಿಕೃತ ವಿರೋಧ ಪಕ್ಷವಾಗಿ ನಿಂತಿದೆ. ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್​​ ಪಕ್ಷವನ್ನು ಮತದಾರರು ತಿರಸ್ಕರಿಸಿದ್ದಾರೆ ಎಂದರು.

ಬಂಟ್ವಾಳದಲ್ಲಿ ಹರ್ಯಾಣ ಹಾಗೂ ಜಮ್ಮು ಕಾಶ್ಮೀರ ಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ರಾಜ್ಯದಲ್ಲಿ ‘ಕೈ’ ಒಂದೂವರೆ ವರ್ಷದಲ್ಲೇ ಜನರ ಹಿಡಿಶಾಪಕ್ಕೆ ಒಳಗಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಪಕ್ಷ ಭ್ರಷ್ಟಾಚಾರದಲ್ಲಿ ಮುಳುಗಿದೆ. ವಾಲ್ಮೀಕಿ ಹಗರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಸದನದಲ್ಲೇ ಒಪ್ಪಿದ್ದಾರೆ. ಮುಡಾ ನಿವೇಶನವನ್ನು ಸಿಎಂ ಸಿದ್ದರಾಮಯ್ಯ ವಾಪಸ್​ ನೀಡಿದ್ದಾರೆ. ಸೈಟ್​ ಹಿಂಪಡೆದು ಸಿಎಂ ಸಿದ್ದರಾಮಯ್ಯ ತಪ್ಪುಗಳನ್ನು ಒಪ್ಪಿಕೊಂಡಿದ್ದಾರೆ. ಪಕ್ಷ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದು ಅಭಿವೃದ್ಧಿಗೆ ಹಣ ನೀಡ್ತಿಲ್ಲ. ಪರಿಷತ್​ ಉಪಚುನಾವಣೆ ಕ್ಷೇತ್ರವನ್ನು ಹಾಲಿ ಸಂಸದ ಕೋಟಾ ಶ್ರೀನಿವಾಸ್​​ ಪೂಜಾರಿ ಪ್ರತಿನಿಧಿಸುತ್ತಿದ್ದರು. ಹಿಂದುತ್ವದ ಕಟ್ಟಾಳು ಕಿಶೋರ್​ ಕುಮಾರ್​ ಅವರನ್ನು ಕಣಕ್ಕಿಳಿಸಿದ್ದೇವೆ. ಹಾಗಾಗಿ ಈ ಕ್ಷೇತ್ರದಲ್ಲಿ ದೊಡ್ಡ ಅಂತರದಲ್ಲಿ ಮತ್ತೊಮೆ ಗೆಲ್ಲುತ್ತೇವೆ ಎಂದರು.

WhatsApp Group Join Now
Telegram Group Join Now
Share This Article