ಬೆಳಗಾವಿ: ನೂತನ ಮೇಯರ್ ಆಗಿ ಆಯ್ಕೆಯಾದ ಮಂಗೇಶ್ ಪವಾರ ಹಾಗೂ ಉಪಮೇಯರ್ ವಾಣಿ ಜೋಶಿ ಅವರನ್ನು ಬಿಜೆಪಿ ಬೆಳಗಾವಿ ಗ್ರಾಮಂತರ ಜಿಲ್ಲೆಯ ವತಿಯಿಂದ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಹಾಗೂ ಬಿ ಡಿ ಸಿ ಸಿ ಬ್ಯಾಂಕ ನಿರ್ದೇಶಕರಾದ ಮಹಾಂತೇಶ ದೊಡ್ಡಗೌಡರ,ನಗರ ಸೇವಕರಾದ ಗಿರೀಶ ದೊಂಗಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ ದೇಶಪಾಂಡೆ, ಬಿಜೆಪಿ ಮುಖಂಡರಾದ ರಮೇಶ್ ದೇಶಪಾಂಡೆ,ರಾಜ್ಯ ಸಾಮಾಜಿಕ ಜಾಲತಾಣ ಸದಸ್ಯ ನಿತಿನ್ ಚೌಗಲೆ, ಜಿಲ್ಲಾ ಮಾಧ್ಯಮ ಪ್ರಮುಖ ಸಚಿನ ಕಡಿ, ಜಿಲ್ಲಾ ಕೋಶಾಧ್ಯಕ್ಷ ಸಂತೋಷ ದೇಶನೂರ, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ಸುಭಾಷ್ ಸಣ್ಣವೀರಪ್ಪನವರ,ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡ್ರ, ಶ್ರೀಕರ ಕುಲಕರ್ಣಿ, ಪ್ರಮೋದ್ ನುಗ್ಗಾನಟ್ಟಿ, ವಿಠ್ಠಲ ಸಾಯಣ್ಣವರ,ವೀರಭದ್ರ ಪೂಜಾರಿ, ಶ್ರೀಧರ ಸಲಬಣ್ಣವರ,ರವಿ ತುರಮರಿ ಹಾಗೂ ಪ್ರಮುಖ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.