ಅತಿವೃಷ್ಟಿ-ಅನಾವೃಷ್ಟಿ ಮುನ್ನೆಚ್ಚರಿಕೆ ಸಭೆ: ಶಾಸಕ ಬಾಬಾಸಾಹೇಬ ಪಾಟೀಲರಿಂದ ಕಟ್ಟುನಿಟ್ಟಿನ ಸೂಚನೆ

Hasiru Kranti
ಅತಿವೃಷ್ಟಿ-ಅನಾವೃಷ್ಟಿ ಮುನ್ನೆಚ್ಚರಿಕೆ ಸಭೆ: ಶಾಸಕ ಬಾಬಾಸಾಹೇಬ ಪಾಟೀಲರಿಂದ ಕಟ್ಟುನಿಟ್ಟಿನ ಸೂಚನೆ
WhatsApp Group Join Now
Telegram Group Join Now

ಚನ್ನಮ್ಮನ ಕಿತ್ತೂರು:ಸೋಮವಾರ ಇಲ್ಲಿಯ  ತಹಶೀಲ್ದಾರ ಕಾರ್ಯಾಲಯದಲ್ಲಿ ಶಾಸಕ ಬಾಬಾಸಾಹೇಬ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಪ್ರಸಕ್ತ ಸಾಲಿನ ಅತಿವೃಷ್ಟಿ ಮತ್ತು ಅನಾವೃಷ್ಟಿ (ಪ್ರಕೃತಿ ವಿಕೋಪ) ಕುರಿತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಜರುಗಿತು.

ಸಭೆಯಲ್ಲಿ ಶಾಸಕರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು. ಈ ವೇಳೆ  ತಾಲೂಕಿನ ಗ್ರಾಮ ಆಡಳಿತಾಧಿಕಾರಿಗಳಿಗೆ ಸರಕಾರದಿಂದ ಹಂಚಿಕೆಯಾದ 12 ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಬಾಬಾಸಾಹೇಬ ದೇ. ಪಾಟೀಲರು ಗ್ರಾಮ ಆಡಳಿತಾಧಿಕಾರಿಗಳಿಗೆ ತಮ್ಮ ಕೆಲಸ-ಕಾರ್ಯಗಳ ಬಗ್ಗೆ ಮಾರ್ಗದರ್ಶನ ನೀಡಿದರು

ಈ ಸಭೆಯು ತಾಲೂಕಿನಲ್ಲಿ ಪ್ರಕೃತಿ ವಿಕೋಪಗಳಿಗೆ ಸಂಬಂಧಿಸಿದ ಮುಂಗಡ ತಯಾರಿ ಬಲಪಡಿಸುವ ಗುರಿಯನ್ನು ಹೊಂದಿದ್ದು, ಶಾಸಕರ ಸೂಚನೆಗಳು ಈ ದಿಶೆಯಲ್ಲಿ ಪರಿಣಾಮಕಾರಿ ಕ್ರಮಕ್ಕೆ ದಾರಿ ಮಾಡಿಕೊಡಲಿವೆ.

ಕಿತ್ತೂರಿನ ರಾಣಿ ಚನ್ನಮ್ಮನವರ ಹೆಸರಿನಲ್ಲಿ: ಈ ಸಭೆಯು ಕಿತ್ತೂರಿನ ಐತಿಹಾಸಿಕ ಮಹತ್ವವನ್ನು ಗೌರವಿಸುವುದರ ಜೊತೆಗೆ, ಆಡಳಿತದಲ್ಲಿ ದಕ್ಷತೆ ಮತ್ತು ಜವಾಬ್ದಾರಿಯನ್ನು ಒತ್ತಿಹೇಳಿತು.

ಈ ವೇಳೆ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ ಹೂಲಿ, ತಹಶೀಲ್ದಾರ ರವೀಂದ್ರ ಹಾದಿಮನಿ ಉಪ ತಹಶೀಲ್ದಾರ ರವೀಂದ್ರ ನೇಸರಗಿ, ಕಂದಾಯ ನಿರೀಕ್ಷಕ ಎಂ.ಎಂ. ನೀರಲಗಿ ತಾಲೂಕಿನ ಎಲ್ಲ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ  ಆಡಳಿತಾಧಿಕಾರಿಗಳು, ಗ್ರಾಮ ಸಹಾಯಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article