ಪೊಲೀಸರಿಂದ ಹೆಲ್ಮೆಟ್ ಜಾಗೃತಿ ಕಾರ್ಯಕ್ರಮ: ಅಯ್ಯನಗೌಡ ಪಾಟಿಲ್

Ravi Talawar
ಪೊಲೀಸರಿಂದ ಹೆಲ್ಮೆಟ್ ಜಾಗೃತಿ ಕಾರ್ಯಕ್ರಮ: ಅಯ್ಯನಗೌಡ ಪಾಟಿಲ್
WhatsApp Group Join Now
Telegram Group Join Now
 ಬಳ್ಳಾರಿ ಜೂನ್ 06 : ಅಪಘಾತಗಳಲ್ಲಿ  ದ್ವಿಚಕ್ರ ವಾಹನ ಸವಾರರಿಗೆ  ತಲೆಗೆ ಪೆಟ್ಟಾಗಿ ಸಾಕಷ್ಟು ಸಾಕಷ್ಟು ಸಾವುಗಳು ಸಂಭವಿಸಿವೆ, ಇದಕ್ಕೆ ಮೂಲ ಕಾರಣವೆಂದರೆ ಹೆಲ್ಮೆಟ್ ಇಲ್ಲದೆ ದ್ವಿಚಕ್ರ ಓಡಿಸುವುದು, ಹೆಲ್ಮೆಟ್ ಹಾಕಿಕೊಂಡು ವಾಹನ ಸವಾರಿ ಮಾಡಿದಲ್ಲಿ ಸಾವು ಸಂಭವಿಸುವ ಸಂದರ್ಭ ಅಂತ ಕಡಿಮೆ ಇರುತ್ತದೆ, ಕಾರಣ ಎಲ್ಲಾ ದ್ವಿಚಕ್ರ ವಾಹನ ಸವಾರರು ತಪ್ಪದೆ ಹೆಲ್ಮೆಟ್ ಧರಿಸಬೇಕೆಂದು  ಸಂಚಾರಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಅಯ್ಯನ್ ಗೌಡ ಪಾಟೀಲ್ ತಿಳಿಸಿದರು.
 ಅವರೆಂದು ನಗರದ ಸಂಗಮ್ ಸರ್ಕಲ್, ರಾಯಲ್ ಸರ್ಕಲ್ ಮತ್ತು ದುರ್ಗಮ್ಮ ಗುಡಿ ಸರ್ಕಲ್ ನಲ್ಲಿ  ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಬಗ್ಗೆ ಜಾಗೃತಿ ಮೂಡಿಸಿ, ಮನೆಯಲ್ಲಿ ನಿಮಗಾಗಿ ಪತಿ ಪತ್ನಿ ಮಕ್ಕಳು ಸೇರಿದಂತೆ ಇಡಿ
ನಿಮ್ಮ ಕುಟುಂಬ ಕಾಯುತ್ತಿರುತ್ತದೆ ನೀವು ಸೇಫ್ ಆಗಿ ಮನೆಗೆ ಸೇರಬೇಕೆಂದಲ್ಲಿ ಹೆಲ್ಮೆಟ್ ಅನ್ನು ಕಡ್ಡಾಯವಾಗಿ ಧರಿಸಬೇಕೆಂದು   ದ್ವಿಚಕ್ರ ವಾಹನ ಸವಾರರಿಗೆ ಕಿವಿಮಾತು ಹೇಳಿದರು.
 ಈ ಸಂದರ್ಭದಲ್ಲಿ ಹೆಲ್ಮೆಟ್ ಹಾಕಿಕೊಂಡು ಬಂದ ದ್ವಿಚಕ್ರ ವಾಹನ  ಯುವಕನೊಬ್ಬನಿಗೆ ಗುಲಾಬಿ ಹೂವನ್ನು ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಚಂದ್ರಕಾಂತ ರೆಡ್ಡಿ ಸೇರಿದಂತೆ ಹಲವಾರು ಜನ ಪೊಲೀಸರು ಅಧಿಕಾರಿಗಳು ಇದ್ದರು.
WhatsApp Group Join Now
Telegram Group Join Now
Share This Article