ಧಾರವಾಡ, ಜೂನ್ 07: ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ಕ್ಷೇತ್ರದ ಬಿಜೆಪಿ ಸದಸ್ಯನಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ ಕುಲಕರ್ಣಿ ಮತ್ತೆ ಜೈಲು ಸೇರಲಿದ್ದಾರೆ. ಆ ಮೂಲಕ ಕಾಂಗ್ರೆಸ್ ಪಕ್ಷದ ಮತ್ತೊಬ್ಬ ಮಾಜಿ ಸಚಿವ ಜೈಲು ಸೇರಲಿದ್ದಾರೆ. ಪ್ರಭಾವಿ ಶಾಸಕರಲ್ಲಿ ಒಬ್ಬರಾಗಿರುವ ವಿನಯ ಕುಲಕರ್ಣಿ, ಈ ಪ್ರಕರಣದಿಂದಾಗಿ ಅವರ ಇಮೇಜ್ಗೂ ಡ್ಯಾಮೇಜ್ ಉಂಟಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಸದ್ಯ ಸಾಕ್ಷಿಗಳಿಗೆ ಲಂಚ ನೀಡಿದ ಆರೋಪದ ಹಿನ್ನೆಲೆ ಸುಪ್ರೀಂ ಕೋರ್ಟ್ ಅವರ ಜಾಮೀನನ್ನು ರದ್ದುಗೊಳಿಸಿದೆ.