ಮೋದಿ ನೇತೃತ್ವದ ಸರ್ಕಾರ ದೇಶದ ಪ್ರಜಾಪ್ರಭುತ್ವ, ಆರ್ಥಿಕತೆ ಮತ್ತು ಸಾಮಾಜಿಕ ರಚನೆ ಮೇಲೆ ಹೊಡೆತ: ಮಲ್ಲಿಕಾರ್ಜುನ ಖರ್ಗೆ

Ravi Talawar
ಮೋದಿ ನೇತೃತ್ವದ ಸರ್ಕಾರ ದೇಶದ ಪ್ರಜಾಪ್ರಭುತ್ವ, ಆರ್ಥಿಕತೆ ಮತ್ತು ಸಾಮಾಜಿಕ ರಚನೆ ಮೇಲೆ ಹೊಡೆತ: ಮಲ್ಲಿಕಾರ್ಜುನ ಖರ್ಗೆ
WhatsApp Group Join Now
Telegram Group Join Now

ನವದೆಹಲಿ: ಕಳೆದ 11 ವರ್ಷಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಪ್ರಜಾಪ್ರಭುತ್ವ, ಆರ್ಥಿಕತೆ ಮತ್ತು ಸಾಮಾಜಿಕ ರಚನೆ ಮೇಲೆ ಆಳವಾದ ಹೊಡೆತ ನೀಡಿದೆ ಎಂದು ಕಾಂಗ್ರೆಸ್ ಸೋಮವಾರ ಹೇಳಿದೆ.

ಈ ಕುರಿತು X ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಈ 11 ವರ್ಷಗಳಲ್ಲಿ ಸರ್ಕಾರವು ಸಂವಿಧಾನದ ಪ್ರತಿಯೊಂದು ಪುಟದಲ್ಲಿ ‘ಸರ್ವಾಧಿಕಾರದ ಶಾಯಿಯನ್ನು ಮಾತ್ರ ಬಳಿದಿದೆ’. ಬಿಜೆಪಿ-ಆರ್‌ಎಸ್‌ಎಸ್ ಪ್ರತಿಯೊಂದು ಸಾಂವಿಧಾನಿಕ ಸಂಸ್ಥೆಯನ್ನು ದುರ್ಬಲಗೊಳಿಸಿದೆ ಮತ್ತು ಅವುಗಳ ಸ್ವಾಯತ್ತತೆಯ ಮೇಲೆ ದಾಳಿ ಮಾಡಿದೆ ಎಂದು ಆರೋಪಿಸಿದ್ದಾರೆ.

ಸಾರ್ವಜನಿಕ ಅಭಿಪ್ರಾಯದ ವಿರುದ್ಧ ಹೋಗುವುದು ಮತ್ತು ಸರ್ಕಾರಗಳನ್ನು ಹಿಂಬಾಗಿಲಿನಿಂದ ಉರುಳಿಸುವುದು ಅಥವಾ ಏಕಪಕ್ಷೀಯ ಸರ್ವಾಧಿಕಾರವನ್ನು ಬಲವಂತವಾಗಿ ಹೇರುವುದು ನಡೆದಿದೆ. ಈ ಅವಧಿಯಲ್ಲಿ, ರಾಜ್ಯಗಳ ಹಕ್ಕುಗಳನ್ನು ನಿರ್ಲಕ್ಷಿಸಲಾಗಿದೆ ಮತ್ತು ಒಕ್ಕೂಟ ವ್ಯವಸ್ಥೆ ರಚನೆಯು ದುರ್ಬಲಗೊಂಡಿದೆ’ ಎಂದು ಖರ್ಗೆ ಹೇಳಿದರು.

‘ದ್ವೇಷ, ಬೆದರಿಕೆ ಮತ್ತು ಭಯ’ದ ವಾತಾವರಣವನ್ನು ಹರಡಲು ನಿರಂತರವಾಗಿ ಪ್ರಯತ್ನಗಳು ನಡೆಯುತ್ತಿವೆ. ದಲಿತರು, ಬುಡಕಟ್ಟು ಜನಾಂಗದವರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ದುರ್ಬಲ ವರ್ಗಗಳ ಮೇಲಿನ ಶೋಷಣೆ ನಿರಂತರವಾಗಿ ಹೆಚ್ಚುತ್ತಿದೆ. ಅವರಿಗೆ ಮೀಸಲಾತಿ ಮತ್ತು ಸಮಾನ ಹಕ್ಕುಗಳನ್ನು ಕಸಿದುಕೊಳ್ಳುವ ಪಿತೂರಿ ಮುಂದುವರೆದಿದೆ. ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವು ಬಿಜೆಪಿಯ ಆಡಳಿತ ವೈಫಲ್ಯಕ್ಕೆ ದೊಡ್ಡ ಪುರಾವೆಯಾಗಿದೆ’ ಎಂದು ಅವರು ಪೋಸ್ಟ್ ಮಾಡಿದ್ದಾರೆ.

WhatsApp Group Join Now
Telegram Group Join Now
Share This Article