ಬಳ್ಳಾರಿ :09. ಇಂದಿನ ಮಾನವನ ಸ್ವಾರ್ಥಭರಿತ ಜೀವನಶೈಲಿಯಿಂದಾಗಿ ಪರಿಸರವು ಸಂಪೂರ್ಣವಾಗಿ ಕಲುಷಿತಗೊಳ್ಳುತ್ತಿದೆ. ಹೀಗಾಗಿ ಪ್ರಸ್ತುತ ಕಲುಷಿತ ಗಾಳಿ, ನೀರು ಹಾಗೂ ಆಹಾರ ಸೇವನೆಯಿಂದಾಗಿ ಅನೇಕ ರೋಗ ರುಜಿನಗಳು ನಮ್ಮನ್ನೆಲ್ಲ ಕಾಡುತ್ತಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ರೋಹಿತಾಕ್ಷ ತಿಳಿಸಿದರು.
ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ಸಹಯೋಗದಲ್ಲಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರೆರೆದು ಮಾತನಾಡಿ,
ಪರಿಸರವು ಸ್ವಚ್ಛವಾಗಿದ್ದರೆ ಮಾತ್ರ ನಾವುಗಳು ಶುದ್ಧ ಗಾಳಿಯನ್ನು ಉಸಿರಾಡಲು ಸಾಧ್ಯವಾಗುತ್ತದೆ. ಆದರೆ ಈ ಪರಿಸರವು ಹಾಳಾಗಲು ಪ್ರಾರಂಭಿಸಿದಾಗ ನಾವುಗಳು ಆರೋಗ್ಯಕ್ಕೆ ಸಂಬಂಧಿತ ಸಮಸ್ಯೆಗಳನ್ನು ಎದುರಿಸುವ ಸಾಧ್ಯತೆಯೇ ಹೆಚ್ಚಾಗಿದೆ. ಹೀಗಾಗಿ ನಮ್ಮ ಆರೋಗ್ಯದ ಬಗ್ಗೆ ಹೇಗೆ ಕಾಳಜಿ ವಹಿಸುತ್ತೇವೆಯೋ ಅದೇ ರೀತಿ ಪರಿಸರದ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು ಎಂದು ಬಳ್ಳಾರಿ ಜಿಲ್ಲಾ ನಿರ್ದೇಶಕ ರೋಹಿತಾಕ್ಷ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಗೀರಿಶ್ ಕುಲಕರ್ಣಿ ಮಾತನಾಡಿ,
ವಿಶ್ವ ಪರಿಸರ ಆರೋಗ್ಯ ದಿನವನ್ನು 2011ರಲ್ಲಿ ಇಂಟರ್ನ್ಯಾಷನಲ್ ಫೆಡರೇಶನ್ ಆಫ್ ಎನ್ವಿರಾನ್ಮೆಂಟಲ್ ಹೆಲ್ತ್ ಕೌನ್ಸಿಲ್ ಪ್ರಾರಂಭಿಸಿತು. ಪರಿಸರಕ್ಕೆ ಆಗುತ್ತಿರುವ ಹಾನಿಯ ಬಗ್ಗೆ ಸಮಾಜಕ್ಕೆ ಮನದಟ್ಟು ಮಾಡಬೇಕೆನ್ನುವುದು ಈ ವಿಶ್ವ ಪರಿಸರ ಸಂರಕ್ಷಣೆಯ ದಿನಾಚರಣೆ ಕಾರ್ಯಕ್ರಮವನ್ನು ಇಡಿ ರಾಜ್ಯಾದ್ಯಂತ ಆಚರಣೆ ಮಾಡಲಾಗುತ್ತದೆ ಎಂದು ಗೀರಿಶ್ ಕುಲಕರ್ಣಿ LDM Canara Bank Ro Bellery ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಎಸ್ ಕೆ ಡಿ ಆರ್ ಡಿ ಪಿ ಯ ಬಸವರಾಜ್ ಕೆ, ಮಾತನಾಡಿ
ಪ್ರತಿ ವರ್ಷ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇಡೀ ರಾಜ್ಯದ್ಯಂತ ಸ್ವ-ಸಹಾಯ ಸಂಘಗಳ ಮೂಲಕ ಪರಿಸರ ಸಂರಕ್ಷಣೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಲಾಗುತ್ತದೆ ಅಷ್ಟೇ ಅಲ್ಲದೆ ವಿಶೇಷವಾಗಿ ಪೂಜ್ಯ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಪ್ರತಿ ತಾಲೂಕಿನಲ್ಲೂ ಆಸಕ್ತಿ ಇರೂ ರೈತರಿಗೆ ಹಾಗೂ ಕೆರೆ ಬದುವಿನ ಮೇಲೆ ದೇವಸ್ಥಾನಗಳ ಆವರಣದಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಪರಿಸರ ಅರಣ್ಯೀಕರಣ ಕಾರ್ಯಕ್ರಮವನ್ನು ಕೂಡ ಆಯೋಜಿಸಿ ಪರಿಸರದ ಸಂರಕ್ಷಣೆಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಡೆಸಲಾಗುತ್ತಿದೆ ಎಂದು ಬಳ್ಳಾರಿ ಯೋಜನಾ ಕಛೇರಿಯ ಕ್ಷೇತ್ರ ಯೋಜನಾಧಿಕಾರಿಗಳು ಬಸವರಾಜ ಕೆ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ- ಸಹಾಯ ತರಬೇತಿ ಕೇಂದ್ರ ನಿರ್ದೇಶಕರಾದ ರಾಜಸಾಬ್, ಸರ್ಕಾರಿ
ಪಾಲಿಟೆಕ್ನಿಕ್ ಕಾಲೇಜಿನ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಸಹಾಯ ತರಬೇತಿ ಕೇಂದ್ರದ ಸಿಬ್ಬಂದಿಗಳು
ವಿಧ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.