ಕಲಬುರಗಿ: ಗುಜರಾತ್ನ ಅಹಮದಾಬಾದ್ನಲ್ಲಿ ಮಧ್ಯಾಹ್ನ ಸಂಭವಿಸಿದ ಏರ್ ಇಂಡಿಯಾ ವಿಮಾನ ಪತನ ದುರಂತದ ಬಗ್ಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹಲವು ಪ್ರಯಾಣಿಕರು ಮತ್ತು ಸಿಬ್ಬಂದಿ ಇದ್ದ ವಿಮಾನ ಅಹಮದಾಬಾದ್ನಿಂದ ಲಂಡನ್ಗೆ ಹಾರುತ್ತಿದ್ದ ವೇಳೆ ಏಕಾಏಕಿ ಪತನವಾಗಿದ್ದು, ಈ ಸುದ್ದಿ ಕೇಳಿ ಬೇಸರವಾಯಿತು. ವಿಮಾನದಲ್ಲಿ ಭಾರತೀಯ ಮತ್ತು ಬ್ರಿಟಿಷ್ ನಾಗರಿಕರು ಇಬ್ಬರೂ ಇದ್ದರು ಎಂದು ವರದಿಯಾಗಿದೆ. ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ಸಡನ್ ಆಗಿ ವಿಮಾನ ಜನವಸತಿ ಪ್ರದೇಶದಲ್ಲಿ ಬಿದ್ದು ಬೆಂಕಿ ಹೊತ್ತಿಕೊಂಡಿದೆ. ಹಲವರ ಸಾವಿಗೆ ಕಾರಣವಾಗಿರುವ ಬಗ್ಗೆ ವರದಿಯಾಗಿದ್ದು, ಉನ್ನತ ಮಟ್ಟದ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.\
ವಿಮಾನ ಪತನವಾಗಲು ತಾಂತ್ರಿಕ ದೋಷವೋ ಅಥವಾ ಇತರ ಕಾರಣವೋ ಗೊತ್ತಾಗಿಲ್ಲ. ಈ ದುರ್ಘಟನೆಯಲ್ಲಿ ಹಲವು ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತೀಯರು ಮತ್ತು ಬ್ರಿಟಿಷ್ ಪ್ರಜೆಗಳು ಇದ್ದರು ಎಂಬುದೂ ತಿಳಿದು ಬಂದಿದೆ. ದುರ್ಘಟನೆ ದೇಶದ ಜನತೆಗೆ ತೀವ್ರ ಆಘಾತ ನೀಡಿದೆ ಎಂದು ಖರ್ಗೆ ಹೇಳಿದ್ದಾರೆ.