ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ 16ನೇ ಆರೋಪಿ ಚಂದ್ರಶೇಖರ ಇಂಡಿ ಎಂಬವರಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.
ಚಂದ್ರಶೇಖರ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ರಾಚಯ್ಯ ಅವರಿದ್ದ ಏಕಸದಸ್ಯ ಈ ಆದೇಶ ನೀಡಿದೆ.
ಅಲ್ಲದೆ, ಆರೋಪಿಗಳು ಪ್ರಕರಣದ ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ್ದಾರೆ ಎಂಬ ಆರೋಪದ ಮೇರೆಗೆ ಚಂದ್ರಶೇಖರ ಅವರ ಜಾಮೀನು ರದ್ದುಪಡಿಸಬೇಕು ಎಂದು ಕೋರಿ ಸಿಬಿಐ ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿತ್ತು.
ಇದನ್ನು ನ್ಯಾಯಾಧೀಶ ಸಂತೋಷ ಗಜಾನನ ಭಟ್ ಪುರಸ್ಕರಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಚಂದ್ರಶೇಖರ ಹೈಕೋರ್ಟ್ ಮೆಟ್ಟಿಲೇರಿದ್ದರು.