ಅಥಣಿ: ತಡರಾತ್ರಿ ಅಥಣಿ ಹೊರವಲಯದಲ್ಲಿ ಸರಣಿ ಅಪಘಾತ ಸಂಭವಿಸಿ ಮೂರು ಜನ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.
ಅಥಣಿ ಹೊರವಲಯದ ಬಣಜವಾಡ ಕಾಲೇಜ್ ಹತ್ತಿರ ಸಂಕೇಶ್ವರ ಜೇರ್ವಗಿ ರಾಷ್ಟ್ರೀಯ ಹೆದ್ದಾರಿ ರಾತ್ರಿ ಅಪಘಾತ ಸಂಭವಿಸಿದ, ಮಹಾರಾಷ್ಟ್ರ ಕೊಲ್ಲಾಪುರ ಜಿಲ್ಲೆಯ ಶಿರೋಳ ತಾಲೂಕಿನ ಗಣೇಶವಾಡಿ ಗ್ರಾಮದ ಮಹೇಶ್ ಸುಭಾಷ್ ಗಾತಾಡೆ (30) ಮತ್ತು ಶಿರೋಳ ತಾಲೂಕಿನ ಪುಡವಾಡ ಗ್ರಾಮದ ಶಿವಂ ಯುವರಾಜ್ ಚೌಹಾನ್ (24) ಹಾಗೂ ಮಹಾರಾಷ್ಟ್ರ ಸಾಂಗ್ಲಿ ಜಿಲ್ಲೆಯ ಮಿರಜ್ ತಾಲೂಕಿನ ಕವಲಾಪುರ ಗ್ರಾಮದ ಸಚಿನ್ ವಿಲಾಸ್ ಮಾಳಿ (42) ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಅಥಣಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಾಲ್ಕು ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು, ಒಂದು ಬೃಹತ್ ಲಾರಿ , ಪಿಕಪ್ ವಾಹನ, ಎರ್ಟಿಗಾ , ಸ್ಕಾರ್ಪಿಯೋ ನಡುವೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಬೆಳಗಾವಿ ಹೆಚ್ಚುವರಿ ಆಧಿಕ್ಷಕರು ಶೃತಿ ಎನ್, ಅಥಣಿ ಡಿವೈಎಸ್ಪಿ ಪ್ರಶಾಂತ ಮುನ್ನೋಳಿ, ಸಿಪಿಐ ಸಂತೋಷ ಹಳ್ಳೂರ, ಪಿಎಸ್ಐ ಗಿರಿಮಲ್ಲಪ್ಪ ಉಪ್ಪಾರ, ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದಾರೆ,
ಗಾಯಾಳುಗಳನ್ನು ರಕ್ಷಿಸಲು ಬಂದವರೇ ಅಪಘಾತದಲ್ಲಿ ಸಾವು! : ಕಾಗವಾಡ ಕಡೆಯಿಂದ ಕೆಂಪು ಇಟ್ಟಿಗೆ ತುಂಬಿಕೊಂಡು ಬೃಹತ್ ಲಾರಿಯಲ್ಲಿ ಅಥಣಿ ಕಡೆ ಬರುತ್ತಿರುವಾಗ ಅಥಣಿಯಿಂದ ಕಾಗವಾಡಕ್ಕೆ ತೆರುಲುತ್ತಿರುವ ಪಿಕಪ್ ವಾಹನ ನಡುವೆ ಅಪಘಾತ ಸಂಭವಿಸಿದೆ, ಎರಡೂ ವಾಹನಗಳು ರಸ್ತೆ ಪಕ್ಕದಲ್ಲಿ ನೆಲಕಚ್ಚಿ ಪಿಕಪ್ ವಾಹನದಲ್ಲಿ ಚಲಾಯಿಸುತ್ತಿದ್ದ ಚಾಲಕ ಮತ್ತು ಕ್ಲೀನರ್ ಸಹಾಯಕ್ಕಾಗಿ ಅಂಗಲಾಚುತ್ತಾರೆ, ಇದನ್ನನ್ನು ಗಮನಿಸಿದ ಸ್ಕಾರ್ಪಿಯೋ ವಾಹನ ಚಾಲಕ ತನ್ನ ವಾಹನ ರಸ್ತೆ ಪಕ್ಕಕೆ ನಿಲ್ಲಿಸಿ ಅವರನ್ನು ರಕ್ಷಿಸಲು ಮುಂದಾದಾಗ ಅಥಣಿ ಕಡೆಯಿಂದ ಬಂದ ಇನೋವಾ ಕಾರು ನೇರವಾಗಿ ರಕ್ಷಿಸಲು ಮುಂದವನಿಗೆ ಹೊಡೆಯುತ್ತಿದ್ದಂತೆ ಸ್ಕಾರ್ಪಿಯ ವಾಹನ ಚಾಲಕ ಹಾಗೂ ಇನೋವಾದಲ್ಲಿ ಇಬ್ಬರೂ ಒಟ್ಟು ಮೂರು ಜನ ಸಾವು ಸಂಭವಿಸುತ್ತದೆ, ಮೊದಲು ಅಪಘಾತವಾಗಿರುವ ಟ್ರಕ್ ಹಾಗೂ ಪಿಕಪ್ ವಾಹನದ ಚಾಲಕ ಕ್ಲೀನರ್ ಗಾಯಾಳುಗಳಾಗಿದ್ದು ಅವರಿಗೆ ಚಿಕಿತ್ಸೆ ಮುಂದುವರಿಯುತ್ತಿದೆ.
ಯಾವ ರೀತಿ ಅಪಘಾತವಾಗಿದೆ ಎಂಬುದು ಅಥಣಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ, ತನಿಖೆಯಿಂದಷ್ಟೇ ಸಂಪೂರ್ಣ ಸತ್ಯಾಂಶ ಹೊರಬರಬೇಕಾಗಿದೆ.