ಜಮೀನು ಒತ್ತುವರಿ ಆರೋಪ ಪ್ರಕರಣ: ಕುಮಾರಸ್ವಾಮಿಗೆ ಬಿಗ್ ರಿಲೀಫ್​

Ravi Talawar
ಜಮೀನು ಒತ್ತುವರಿ ಆರೋಪ ಪ್ರಕರಣ: ಕುಮಾರಸ್ವಾಮಿಗೆ ಬಿಗ್ ರಿಲೀಫ್​
WhatsApp Group Join Now
Telegram Group Join Now

ಬೆಂಗಳೂರು, ಜೂನ್​ 19: ಬಿಡದಿಯ ಕೇತಗಾನಹಳ್ಳಿ‌ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್​ ಸಿಕ್ಕಿದೆ. ಸರ್ಕಾರ ರಚಿಸಿದ್ದ ಎಸ್ಐಟಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ, ನ್ಯಾ.ಇ.ಎಸ್.ಇಂದಿರೇಶ್​ರಿಂದ ಗುರುವಾರ ಆದೇಶ ಹೊರಡಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ರಚನೆ ಪ್ರಶ್ನಿಸಿ ಹೈಕೋರ್ಟ್​ಗೆ ಹೆಚ್.ಡಿ.ಕುಮಾರಸ್ವಾಮಿ ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ವಿಚಾರಣೆ ಕೈಗೆತ್ತಿಕೊಂಡಿತ್ತು. ಈ ವೇಳೆ ಹೆಚ್​​​ಡಿ ಕುಮಾರಸ್ವಾಮಿ ಪರ ಹಿರಿಯ ವಕೀಲ ಉದಯ್ ಹೊಳ್ಳ ಮತ್ತು ಎ.ವಿ.ನಿಶಾಂತ್ ವಾದ ಮಂಡಿಸಿದ್ದು, ಅಧಿಸೂಚನೆಯಿಲ್ಲದೇ ಎಸ್ಐಟಿ ರಚನೆ ಕಾನೂನುಬಾಹಿರ. ಎಸ್ಐಟಿಯ ಕ್ರಮಗಳನ್ನು ಅನೂರ್ಜಿತವೆಂದು ಘೋಷಿಸಲು ಮನವಿ ಮಾಡಿದರು.

 

WhatsApp Group Join Now
Telegram Group Join Now
Share This Article