ಇಂದಿನಿಂದ ಮುಂಗಾರು ಚುರುಕು

Ravi Talawar
ಇಂದಿನಿಂದ ಮುಂಗಾರು ಚುರುಕು
WhatsApp Group Join Now
Telegram Group Join Now

ಬೆಂಗಳೂರು, ಜೂನ್ 24: ಕರ್ನಾಟಕದಾದ್ಯಂತ ಇಂದಿನಿಂದ ಮುಂಗಾರು ಚುರುಕುಗೊಳ್ಳಲಿದ್ದು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.  ಮುಂಗಾರು ಆರಂಭವಾಗಿ 15 ದಿನಗಳು ಕಳೆದಿದ್ದರೂ ಕರಾವಳಿ ಹಾಗೂ ಮಲೆನಾಡಿನ ಕೆಲವು ಕಡೆ ಬಿಟ್ಟರೆ ಬೇರೆಲ್ಲೂ ಅಷ್ಟೊಂದು ಮಳೆಯಾಗಿರಲಿಲ್ಲ. ಈಗ ಜೂನ್ 23ರಿಂದಲೇ ಹಲವೆಡೆ ಮಳೆಯಾಗುತ್ತಿದ್ದು, ಜೂನ್ 30ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿಜಯನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ, ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

WhatsApp Group Join Now
Telegram Group Join Now
Share This Article