ಬೆಂಗಳೂರು/ಶಿವಮೊಗ್ಗ: ರಾಜ್ಯದ ವಿವಿಧೆಡೆ 8 ಜನ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಇಂದು ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಆನೇಕಲ್, ಗದಗ, ಧಾರವಾಡ, ಕಲಬುರಗಿ ಹಾಗೂ ಬೆಳಗಾವಿಯ ವಿವಿಧೆಡೆ ಶೋಧ ಕಾರ್ಯ ಮುಂದುವರೆದಿದೆ ಎಂದು ಲೋಕಾಯುಕ್ತ ಮೂಲಗಳು ಮಾಹಿತಿ ನೀಡಿವೆ.
ದಾಳಿಗೊಳಗಾದ ಅಧಿಕಾರಿಗಳ ವಿವರ: ಬಿಬಿಎಂಪಿ ಕಾರ್ಯ ನಿರ್ವಾಹಕ ಇಂಜಿನಿಯರ್ ಪ್ರಕಾಶ್,ಶಿವಮೊಗ್ಗದ ಸಾವಯವ ಕೃಷಿ ವಿಭಾಗದ ಸಹ ಸಂಶೋಧನ ನಿರ್ದೇಶಕ ಡಾ.ಎಸ್.ಪ್ರದೀಪ್,ಚಿಕ್ಕಮಗಳೂರು ಪಟ್ಟಣ ಪುರಸಭೆ ಲೆಕ್ಕಾಧಿಕಾರಿ ಲತಾ ಮಣಿ.ಆನೇಕಲ್ ಪಟ್ಟಣ ಪುರಸಭೆಯ ಮುಖ್ಯಾಧಿಕಾರಿ ಕೆ.ಜಿ.ಅಮರನಾಥ್,ಗದಗ ಪಟ್ಟಣ ಪೊಲೀಸ್ ನಿರೀಕ್ಷಕರು ಧೃವರಾಜ್,ಧಾರವಾಡ ಮಲಪ್ರಭಾ ಪ್ರಾಜೆಕ್ಟ್ ಇಂಜಿನಿಯರ್ ಅಶೋಕ್ ವಲ್ಸಂದ್,ಕಲ್ಬುರ್ಗಿಯ ಆರ್ಡಿಪಿಆರ್ ಮಾಜಿ ಎಂಜಿನಿಯರ್ ಮಲ್ಲಿಕಾರ್ಜುನ ಅಲಿಪುರ,ಕಲ್ಬುರ್ಗಿ ಪಿಡಿಒ ರಾಮಚಂದ್ರ
ಶಿವಮೊಗ್ಗ ವಿವಿ ಸಹ ಸಂಶೋಧನ ನಿರ್ದೇಶಕರ ಮನೆ ಮೇಲೆ ದಾಳಿ: ಸಾಗರ ತಾಲೂಕು ಇರುವಕ್ಕಿಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಸಹ ಸಂಶೋಧನಾ ನಿರ್ದೇಶಕ ಡಾ.ಎಸ್.ಪ್ರದೀಪ್ ಎಂಬವರ ಮನೆ ಮೇಲೆ ಶಿವಮೊಗ್ಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.