ಧಾರವಾಡ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ದಂತ ವೈದ್ಯಕೀಯ ಕಾಲೇಜು, ಸತ್ತೂರು, ಗ್ರಾಮ ಪಂಚಾಯತ್ ಮಾರಡಗಿ, ಸರ್ಕಾರಿ ಪ್ರೌಢ ಮತ್ತು ಪ್ರಾಥಮಿಕ ಶಾಲೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಸಹಯೋಗದಲ್ಲಿ ತಾಲೂಕಿನ ಮಾರಡಗಿ ಗ್ರಾಮದಲ್ಲಿ ಮಂಗಳವಾರ ಉಚಿತ ದಂತ ತಪಾಸಣೆ ಶಿಬಿರ, ದಂತ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಧಾರವಾಡ ಪ್ರಾದೇಶಿಕ ವಿಭಾಗದ ನಿರ್ದೇಶಕರಾದ ದಯಾಶೀಲ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ಹಲ್ಲು ಮನುಷ್ಯನಿಗೆ ಬಹಳ ಮುಖ್ಯವಾದದ್ದು. ಹಲ್ಲಿನ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಮತ್ತು ಪರಿಸರ ರಕ್ಷಣೆಯನ್ನು ಮಾಡುವುದು ನಮ್ಮಲೆಲ್ರ ಆದ್ಯತೆ ಆಗಬೇಕು ಎಂದರು.
ದಂತ ವೈದ್ಯಾಧಿಕಾರಿ ಡಾ. ಶೋಧನ ರವರು ಹಲ್ಲಿನ ಶುಚಿತ್ವ, ರಕ್ಷಣೆ ಮತ್ತು ವಿಧಗಳ ಬಗ್ಗೆ ಸೂಕ್ತ ಮಾಹಿತಿ ನಿಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ನೇತ್ರಾವತಿ ಬಂಡಿವಾಡ ಅಧ್ಯಕ್ಷತೆವಹಿಸಿದ್ದ ಕಾರ್ಯಕ್ರಮದಲ್ಲಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರದೀಪ್ ಶೆಟ್ಟಿ, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ದ್ಯಾಮಣ್ಣ ಹುಡೇದ, ಹಿರಿಯರಾದ ಗಂಗಾಧರ ಪಾಟೀಲ ಕುಲಕರ್ಣಿ, ಗ್ರಾಮ ಪಂಚಾಯತ ಉಪಾಧ್ಯಕ್ಷೆ ಜ್ಯೋತಿ ಗೌಡರ್, ಗ್ರಾಮ ಪಂಚಾಯತ್ ಸದಸ್ಯರು, ಕ್ಷೇತ್ರ ಯೋಜನಾಧಿಕಾರಿ ಅಶೋಕ, ಒಕ್ಕೂಟದ ಪದಾಧಿಕಾರಿಗಳು, ಶಿಕ್ಷಕರು, ವಲಯ ಹಾಗೂ ಕೃಷಿ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಸಂಘಗಳ ಸದಸ್ಯರು ಹಾಗೂ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸುಮಾರು ೨೦೦ ಕ್ಕೂ ಹೆಚ್ಚು ಜನರು ದಂತ ತಪಾಸಣೆಯ ಪ್ರಯೋಜನ ಪಡೆದರು.