ಬೆಂಗಳೂರು, ಜೂನ್ 25: ಇಂಜಿನಿಯರಿಂಗ್ ಅಕ್ರಮ ಸೀಟ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಬಿಎಂಎಸ್ ಕಾಲೇಜು ಸೇರಿ ಕರ್ನಾಟಕದ 18 ಕಡೆ ಇ.ಡಿ ದಾಳಿ ಮಾಡಿದೆ. ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣಗಳ ಸಂಬಂಧ ಕೂಡ ಇಡಿ ದಾಳಿ ಮಾಡಿದ್ದು, ಬೆಳಗ್ಗೆ 6 ಗಂಟೆಯಿಂದ ಅಧಿಕಾರಿಗಳು ಕಡತಗಳ ಪರಿಶೀಲನೆ ಮಾಡಿದರು.
2021-22ರಲ್ಲಿ ನಡೆದಿದ್ದ ಅಕ್ರಮ ಸೀಟ್ ಬ್ಲಾಕಿಂಗ್ ದಂಧೆಯಲ್ಲಿ ಬಿಎಂಎಸ್ ಕಾಲೇಜಿನ ಟ್ರಸ್ಟ್ ವಿರುದ್ಧ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಸೀಟ್ ಬ್ಲಾಕಿಂಗ್ ಕುರಿತು ರಮೇಶ್ ನಾಯಕ್ ದೂರು ನೀಡಿದ್ದರು. ಹಾಗಾಗಿ ಟ್ರಸ್ಟ್ ಅಧ್ಯಕ್ಷೆ ರಾಗಿಣಿ ನಾರಾಯಣ ವಿರುದ್ಧ ಎಫ್ಐಆರ್ ದಾಖಲಾಗಿತ್ತು.