88ನೇ ಸಾಹಿತ್ಯ ಸಮ್ಮೇಳಕ್ಕೆ ಬಳ್ಳಾರಿ ಜಿಲ್ಲೆಯನ್ನು ಸಜ್ಜುಗೊಳಿಸಿ : ಮೆಣಸಿನ ಈಶ್ವರಪ್ಪ 

Ravi Talawar
88ನೇ ಸಾಹಿತ್ಯ ಸಮ್ಮೇಳಕ್ಕೆ ಬಳ್ಳಾರಿ ಜಿಲ್ಲೆಯನ್ನು ಸಜ್ಜುಗೊಳಿಸಿ : ಮೆಣಸಿನ ಈಶ್ವರಪ್ಪ 
WhatsApp Group Join Now
Telegram Group Join Now
 ಬಳ್ಳಾರಿ ಜೂನ್ 25 : ಇದೇ ಡಿಸೆಂಬರ್ ನಲ್ಲಿ ಬಳ್ಳಾರಿ ನಗರದಲ್ಲಿ ಜರುಗುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಯಶಸ್ವಿಗೊಳಿಸಲು ಬಳ್ಳಾರಿ ನಗರದ ರಸ್ತೆಯ ತಗ್ಗು  ಗುಂಡಿಗಳನ್ನು ಮುಚ್ಚಿ ಎಲ್ಲಾ ವ್ಯವಸ್ಥೆಯನ್ನು ಕಲ್ಪಿಸುವುದರ ಮೂಲಕ ಸಜ್ಜುಗೊಳಿಸಬೇಕಾದ ಅವಶ್ಯಕತೆ ನಮ್ಮ ನಿಮ್ಮ ಮೇಲಿದೆ ಕಾರಣ ಮಹಾನಗರ ಪಾಲಿಕೆ ಅಧಿಕಾರಿಗಳು ಈ ಕುರಿತು ಕ್ರಮ ಕೈಗೊಂಡು ಸಮ್ಮೇಳನಕ್ಕೆ ಯಾವುದೇ ತೊಂದರೆ ಆಗದಂತೆ ನಗರವನ್ನು ಸಜ್ಜುಗೊಳಿಸಬೇಕೆಂದು ಕನ್ನಡ ನಾಡು ರೈತ ಸಂಘದ ಜಿಲ್ಲಾಧ್ಯಕ್ಷ ಮೆಣಸಿನ ಕಾಯಿ ಈಶ್ವರಪ್ಪ ಮನವಿ ಮಾಡಿದರು.
 ಅವರಿಂದು ಮಹಾನಗರ ಪಾಲಿಕೆಯಲ್ಲಿ ಮೇಯರ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿ ಮಾತನಾಡಿ, ನಮ್ಮ ರೈತ ಸಂಘದ ಹೆಸರನ್ನು ಕನ್ನಡ ನಾಡು ಎಂದು ಇಟ್ಟುಕೊಂಡಿರುವುದಕ್ಕೆ ನಮಗೆ ಅತ್ಯಂತ ಹೆಮ್ಮೆ ಇದೆ ಈ ದೃಷ್ಟಿಯಿಂದ ನಾವು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಳ್ಳಾರಿಯನ್ನು ಅತ್ಯಂತ ಸುಸಜ್ಜಿತ ರೀತಿಯಲ್ಲಿ  ರೀತಿಯಲ್ಲಿ ಸಜ್ಜಿಗೊಳಿಸಬೇಕೆಂದು ಮನವಿ ಮಾಡಿಕೊಳ್ಳುತ್ತಿದ್ದೇವೆ ಅಷ್ಟೇ ಅಲ್ಲದೆ ನಮ್ಮ ಕನ್ನಡ ನಾಡು ರೈತ ಸಂಘದಿಂದ ಸಮ್ಮೇಳದಲ್ಲಿ ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇವೆ ಎಂದು ಈಶ್ವರಪ್ಪ ತಿಳಿಸಿದರು.
 ಈ ಸಂದರ್ಭದಲ್ಲಿ ಕನ್ನಡ ನಾಡು ರೈತ ಸಂಘದ ಪದಾಧಿಕಾರಿಗಳು ಹಲವು ರೈತರ ಮುಖಂಡರುಗಳು ಇದ್ದರು.
WhatsApp Group Join Now
Telegram Group Join Now
Share This Article