ಬೆಂಗಳೂರು, ಜೂನ್ 27: ಕರ್ನಾಟಕದಾದ್ಯಂತ ಭಾರಿ ಮಳೆಯಾಗುತ್ತಿದೆ. ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿ, ಬೀದರ್, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿರಾಜಪೇಟೆ, ಕೊಟ್ಟಿಗೆಹಾರ, ಶೃಂಗೇರಿ, ಹುಂಚದಕಟ್ಟೆ, ಬೆಳ್ತಂಗಡಿ, ಯಲ್ಲಾಪುರ, ಕ್ಯಾಸಲ್ರಾಕ್, ಖಾನಾಪುರ, ಕೊಪ್ಪ, ಸೋಮವಾರಪೇಟೆ, ಪೊನ್ನಂಪೇಟೆ, ಸಿದ್ದಾಫುರ, ಕದ್ರಾ, ಬನವಾಸಿಯಲ್ಲಿ ಭಾರಿ ಮಳೆಯಾಗಿದೆ.